More

    ಶಿಕ್ಷಕರು ಸುಶಿಕ್ಷಿತ ಸಮಾಜದ ನಿರ್ಮಾತೃರು

    ಹುಬ್ಬಳ್ಳಿ: ಪ್ರತಿ ಸಾಧಕರ ಹಿಂದೆ ಶಿಕ್ಷಕರ ಅವಿರತ ಶ್ರಮವಿರುತ್ತದೆ. ಸುಂದರ ಹಾಗೂ ಸುಶಿಕ್ಷಿತ ಸಮಾಜದ ನಿರ್ವತೃರು ಶಿಕ್ಷಕರೇ ಆಗಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

    ಬಿಡ್ನಾಳದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2020-21ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ಜಂಗಳಿ ಹಾಗೂ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

    ಮಕ್ಕಳ ಬೌದ್ಧಿಕ ಜ್ಞಾನ ವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಮಕ್ಕಳ ಮನಸ್ಥಿತಿಯನ್ನು ಅರ್ಥೈಸಿಕೊಂಡು ಚಟುವಟಿಕೆ ಆಧಾರಿತ ಕಲಿಕಾ ಕ್ರಮದೊಂದಿಗೆ ಮಕ್ಕಳನ್ನು ಕಲಿಕೆಯತ್ತ ಆಸಕ್ತಿ ಮೂಡಿಸಿ ಶಾಲೆಯತ್ತ ಆಕರ್ಷಿಸಬೇಕು. ಕಲಿಕೆಗೆ ಬೇಲಿ ಹಾಕಿಕೊಂಡರೆ ಯಾರೂ ಪರಿಪೂರ್ಣ ಜ್ಞಾನ ಹೊಂದಲು ಸಾಧ್ಯವಿಲ್ಲ. ಬಿಡ್ನಾಳ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಜಂಗಳಿ ಅವರ ಸಾಧನೆ ನನ್ನ ಕ್ಷೇತ್ರಕ್ಕೆ ಹಾಗೂ ಹುಬ್ಬಳ್ಳಿಗೆ ಹಮ್ಮೆ ವಿಷಯವಾಗಿದ್ದು, ಇತರರಿಗೂ ಅನುಕರಣೀಯ ಎಂದು ಶ್ಲಾಘಿಸಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಪಾಲಿಕೆ ಮಾಜಿ ಸದಸ್ಯರಾದ ಮೋಹನ ಅಸುಂಡಿ, ಲಕ್ಷ್ಮಿಬಾಯಿ ಜಾಧವ, ವಿಜುನಗೌಡ ಪಾಟೀಲ, ಮುಖ್ಯ ಶಿಕ್ಷಕ ಆರ್.ಬಿ. ಮಡಿವಾಳರ, ಎಸ್​ಡಿಎಂಸಿ ಅಧ್ಯಕ್ಷ ಶೌಕತ್ ಅಲಿ ತುಗ್ಗಾನಟ್ಟಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts