More

    ಶಿಬಿರದಲ್ಲಿ 38 ಯುನಿಟ್ ರಕ್ತ ಸಂಗ್ರಹ

    ಹಳಿಯಾಳ: ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್​ಸೆಟಿ ಸಂಸ್ಥೆಯ ಸಭಾಂಗಣದಲ್ಲಿ ಸ್ವಾತಂತ್ರೋತ್ಸವದ ನಿಮಿತ್ತ ರಕ್ತದಾನ ಶಿಬಿರ ನಡೆಯಿತು.

    ಕೆನರಾ ಬ್ಯಾಂಕ್ ದೇಶಪಾಂಡೆ ಆರ್​ಸೆಟಿ ಹಾಗೂ ಹುಬ್ಬಳ್ಳಿಯ ಕ್ಯಾನ್ಸರ್ ಆಸ್ಪತ್ರೆ, ವಿಆರ್​ಡಿ ಟ್ರಸ್ಟ್, ತಾಲೂಕು ಆಡಳಿತ, ತಾಪಂ ಸೇರಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು.

    ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರವೀಣಕುಮಾರ ಸಾಲಿ, ದಾಂಡೇಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಗಸ್ತಿ, ಕ್ರೖೆಂ ಪಿಎಸ್​ಐ ರಾಜಕುಮಾರ, ಪುರಸಭೆ ಪರಿಸರ ವಿಭಾಗದ ಇಂಜಿನಿಯರ್ ದರ್ಶಿತಾ, ಜಿಪಂ ಇಲಾಖೆಯ ಇಂಜಿನಿಯರ್, ಕಂದಾಯ, ಪೊಲೀಸ್, ಹೆಸ್ಕಾಂ, ಆಹಾರ ಇಲಾಖೆಯ ಸಿಬ್ಬಂದಿ ವಿವಿಧ ಸಂಘಟನೆ ಪ್ರಮುಖರು ರಕ್ತದಾನ ಮಾಡಿದರು. ಒಟ್ಟು 38 ಯುನಿಟ್ ರಕ್ತ ಸಂಗ್ರಹಣೆಯಾಯಿತು.

    ತಹಸೀಲ್ದಾರ್ ವಿದ್ಯಾಧರ ಗುಳಗುಳೆ ಶಿಬಿರಕ್ಕೆ ಚಾಲನೆ ನೀಡಿ ರಕ್ತದಾನಿಗಳನ್ನು ಅಭಿನಂದಿಸಿದರು. ವಿಆರ್​ಡಿ ಟ್ರಸ್ಟ್ ಆಡಳಿತಾಧಿಕಾರಿ ಪ್ರಕಾಶ ಪ್ರಭು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್​ಸೆಟಿ ಸಂಸ್ಥೆಯ ನಿರ್ದೇಶಕ ನಿತ್ಯಾನಂದ ವೈದ್ಯ, ಸಂಯೋಜಕ ವಿನಾಯಕ ಚವ್ಹಾಣ, ಹುಬ್ಬಳ್ಳಿ ಕ್ಯಾನ್ಸರ್ ಆಸ್ಪತ್ರೆಯ ವೈದ್ಯ ಡಾ. ಉಮೇಶ ಹಳ್ಳಿಕೇರಿ, ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಪಿಆರ್​ಒ ಮಂಜುನಾಥ ಹೆಗಡೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts