More

    ಶೀಲ ಶಂಕಿಸಿ ಪತ್ನಿಗೆ ಗುಂಡೇಟು

    ಕಾರವಾರ: ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಗುಂಡು ಹೊಡೆದ ಪತಿಯನ್ನು ಕದ್ರಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಗೋಯರ ಗ್ರಾಮದ ರಮೇಶ ದೇಸಾಯಿ ಬಂಧಿತ. ಆತನ ಪತ್ನಿ ರಸಿಕಾ ತೀವ್ರವಾಗಿ ಗಾಯಗೊಂಡಿದ್ದು, ಸರ್ಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

    ಪತಿ-ಪತ್ನಿಯ ನಡುವೆ ಸದಾ ಜಗಳವಾಗುತ್ತಿತ್ತು. ಇದರಿಂದ ಡಿ. 4ರಂದು ಕಾಡಿಗೆ ಕರೆದೊಯ್ದು, ಕಾಡು ಪ್ರಾಣಿ ಹೊಡೆಯಲು ಬಳಸುವ ಬಂದೂಕಿನಿಂದ ಗುಂಡು ಹಾರಿಸಿದ್ದ.

    ಪತ್ನಿಯ ಭುಜ ಹಾಗೂ ಕಿಬ್ಬೊಟ್ಟೆಗೆ ಗಾಯವಾಗಿತ್ತು. ಆಕೆಯನ್ನು ತಂದು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದ. ಕಟ್ಟಿಗೆ ತರಲು ಕಾಡಿಗೆ ಹೋದಾಗ ಅಪರಿಚಿತ ಬೇಟೆಗಾರರು ಗುಂಡು ಹಾರಿಸಿ ಗಾಯವಾಯಿತು ಎಂದು ಹೇಳಿದ್ದ. ಕದ್ರಾ ಪೊಲೀಸ್ ಠಾಣೆಯಲ್ಲೂ ಇದೇ ರೀತಿ ದೂರು ನೀಡಿದ್ದ.

    ಅನುಮಾನಗೊಂಡ ಪೊಲೀಸರು ರಸಿಕಾಳನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಆಕೆ ನಡೆದ ಘಟನೆ ಬಾಯ್ಬಿಟ್ಟಿದ್ದಾಳೆ. ಪೊಲೀಸರು ರಮೇಶನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts