ಕೊಳ್ಳೇಗಾಲ: ತೆಳ್ಳನೂರು ಗ್ರಾಮದಲ್ಲಿ ಕಾರ್ಶೆಡ್ನಲ್ಲಿ ನಿಂತಿದ್ದ ಕಾರೊಂದಕ್ಕೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಕಾರು ಸಂಪೂರ್ಣ ಭಸ್ಮವಾಗಿದೆ. ತೆಳ್ಳನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವರ ಪತಿ ರಮೇಶ್ ಅವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ.
ಏನಿದು ಘಟನೆ?: ರಮೇಶ್ ಅವರ ಕುಟುಂಬ ತೆಳ್ಳನೂರು ಗ್ರಾಮದ ಹೊರ ಹೊಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಿತ್ತು. ಮನೆಯ ಪಕ್ಕದಲ್ಲಿ ಕಾರು ನಿಲುಗಡೆಗಾಗಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್ನಲ್ಲಿ ಕಾರನ್ನು ಪ್ರತಿದಿನ ನಿಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಸಹ ಕಾರನ್ನು ನಿಲ್ಲಿಸಿದ್ದರು. ಅಂದು ರಾತ್ರಿ ಸುಮಾರು 12.30 ಗಂಟೆಯಲ್ಲಿ ಕಾರ್ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಹೊತ್ತಿ ಉರಿಯುತ್ತಿದ್ದನ್ನು ಕಂಡ ರಮೇಶ್ ಹಾಗೂ ಅವರ ಕುಟುಂಬ ಸದಸ್ಯರು ಮನೆಯಿಂದ ಹೊರಬಂದಿದ್ದರು. ಅಷ್ಟರಲ್ಲಾಗಲೆ ಬೆಂಕಿಯ ಕೆನ್ನಾಲಿಗೆ ಆವರಿಸಿದ್ದರಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಜಿ.ಯು.ಸೋಮೇಗೌಡ, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಗಣೇಶ್ ಭೇಟಿ ನೀಡಿ ಪರಿಶೀಲಿಸಿದರು. ಬೆಂಕಿಗೆ ಕಾರು ಹಾಗೂ ಶೆಡ್ನಲ್ಲಿದ್ದ ಸಾವಿರಾರು ರೂ. ಮೌಲ್ಯದ ವ್ಯವಸಾಯದ ಪರಿಕರವೂ ಸುಟ್ಟು ಕರಕಲಾಗಿವೆ. ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸುವಂತೆ ರಮೇಶ್ ಶನಿವಾರ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಮುಂದಾಗಿದ್ದಾರೆ.