More

    ಶ್ರೀ ನವದುರ್ಗಾ ಪರಮೇಶ್ವರಿ ಜಾತ್ರೋತ್ಸವ ಪ್ರಾರಂಭ

    ಸೋಮವಾರಪೇಟೆ: ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದ ಜಾತ್ರೋತ್ಸವ ಗುರುವಾರ ಪ್ರಾರಂಭವಾಯಿತು. ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ.ಜಿ.ಮಲ್ಲಿಕಾ ದೇವಿಗೆ ಜ್ಯೋತಿ ಬೆಳಗುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಿದರು.

    ದೇವಾಲಯ ಸಮಿತಿ ವತಿಯಿಂದ ಆಯೋಜಿಸಿರುವ ಮುಕ್ತ ಫುಟ್ಬಾಲ್ ಪಂದ್ಯಾವಳಿಗೆ ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್ ಚಾಲನೆ ನೀಡಿದರು. ಪ್ರತಿ ವರ್ಷ ಗೌಡಳ್ಳಿಯಲ್ಲಿ ಜಾತ್ರೋತ್ಸವ ಪ್ರಯುಕ್ತ ಕ್ರೀಡಾಸ್ಪರ್ಧೆಗಳು ನಡೆಯುತ್ತಿದ್ದು, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇದೊಂದು ವೇದಿಕೆಯಾಗಿದೆ ಎಂದರು.


    ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಾಗುತ್ತದೆ. ಉತ್ತಮ ಆರೋಗ್ಯದ ದೃಷ್ಟಿಯಿಂದಲೂ ಕ್ರೀಡೆ ಅವಶ್ಯಕವಾಗಿದೆ. ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳಿಗೆ ಪೋತ್ಸಾಹ ನೀಡಬೇಕು ಎಂದರು.

    ದೇವಾಲಯ ಸಮಿತಿ ಅಧ್ಯಕ್ಷ ಬಿ.ಪಿ.ಮೊಗಪ್ಪ, ಉಪಾಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಮಾಜಿ ಅಧ್ಯಕ್ಷ ಎಚ್.ಆರ್.ಮುತ್ತಣ್ಣ, ಪಿಡಿಒ ಲಿಖಿತಾ, ಪ್ರಮುಖರಾದ ವಿಶ್ವರೂಪಚಾರ್, ಮಹೇಶ್, ಜಿ.ಎ.ಮಹೇಶ್, ಮಮತಾ ಲೋಕೇಶ್, ನಾಗರತ್ನ, ಟಿ.ಆರ್.ರಾಮಚಂದ್ರ, ಗುರುಪ್ರಸಾದ್, ಕೆ.ಜಿ.ದಿನೇಶ್, ಪ್ರವೀಣ್, ವಿ.ಸಿ.ಸುಮಂತ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts