More

    ಸಂಚಾರ ನಿಯಮಗಳನ್ನು ಪಾಲಿಸಿ

    ಮಡಿಕೇರಿ: ಜಿಲ್ಲಾ ಪೊಲೀಸ್ ಸಂಚಾರಿ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಡಕ್ ಸುರಕ್ಷಾ-ಜೀವನ್ ರಕ್ಷಾ ಎಂಬ ಘೋಷ ವಾಕ್ಯದೊಂದಿಗೆ ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ ಡಿವೈಎಸ್‌ಪಿ ಬಾರಿಕೆ ದಿನೇಶ್ ಕುಮಾರ್ ಅವರು ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಮಾತನಾಡಿ, ವಾಹನ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ವಾಹನಗಳನ್ನು ಅತಿ ವೇಗವಾಗಿ ಚಾಲನೆ ಮಾಡಬಾರದು ಮತ್ತು ಚಾಲನೆಯಲ್ಲಿ ಮೊಬೈಲ್ ಫೋನ್ ಬಳಸಬಾರದು. ಈ ಎಲ್ಲ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಅಪಘಾತಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

    ಅನುಪ್‌ಕುಮಾರ್, ಸಿಬ್ಬಂದಿ, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts