More

    ಸಂತ ಸೇವಾಲಾಲ್ ಜಯಂತಿ 26ಕ್ಕೆ

    ಚಿತ್ರದುರ್ಗ: ವಿಶ್ವಕ್ಕೆ ಶಾಂತಿ, ಸಹಬಾಳ್ವೆ, ಸೌಹಾರ್ದತೆಯ ಸಂದೇಶ ಸಾರಿದ ಸಂತ ಸೇವಾಲಾಲ್‌ರ 285ನೇ ಜಯಂತ್ಯುತ್ಸವವನ್ನು ಫೆ.26ರಂದು ತರಾಸು ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ತಿಳಿಸಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಬಂಜಾರ ಜನಜಾಗೃತಿ ಅಭಿಯಾನ ಸಮಿತಿ, ಬಂಜಾರ ರಕ್ಷಣಾ ವೇದಿಕೆ ಹಾಗೂ ಸಮುದಾಯದಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಅವರನ್ನು ಗೌರವಿಸಲಾಗುವುದು ಎಂದರು.

    ಅಂದು ಬೆಳಗ್ಗೆ 10ಕ್ಕೆ ನೀಲಕಂಠೇಶ್ವರ ಸ್ವಾಮಿ ದೇಗುಲದಿಂದ ಬೆಳ್ಳಿ ವರ್ಣದ ಸಾರೋಟಿನಲ್ಲಿ ಸೇವಾಲಾಲ್ ಮಹಾರಾಜರು, ಅಂಬೇಡ್ಕರ್, ನಾಲ್ವಡಿ ಕೃಷ್ಣರಾಜರ ಭಾವಚಿತ್ರ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವಿರೇಂದ್ರ ಪಪ್ಪಿ, ಮುಖಂಡ ಕೆ.ಸಿ.ನಾಗರಾಜ್ ಇತರರು ಅತಿಥಿಗಳಾಗಿ ಭಾಗವಹಿಸುವರು. ಸಮಾಜದ ಮಹಿಳೆಯರಿಂದ ತೀಜ್ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ಸಮಿತಿ ಸದಸ್ಯರಾದ ಆರ್.ನಿಂಗಾನಾಯ್ಕ್, ತಿಪ್ಪೇಶ್‌ನಾಯ್ಕ್, ಎಲ್.ರಮೇಶ್, ಅನಿಲ್, ಗಣೇಶ್‌ನಾಯ್ಕ್, ಚಂದ್ರಾನಾಯ್ಕ್, ಆರ್.ನವೀನ್, ಡಾ.ಕೆ.ಈಶ್ವರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts