ಹನಗೋಡು: ಸಣ್ಣೇನಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆದಿದ್ದ ಶುಂಠಿ ಫಸಲನ್ನು ಶನಿವಾರ ರಾತ್ರಿ ಕಳ್ಳರು ಕದ್ದೊಯ್ದಿದ್ದಾರೆ.
ಚೆನ್ನಸೋಗೆ ಗ್ರಾಮದ ಪ್ರಸನ್ನ ಕುಮಾರ್, ಹೊಸಕೋಟೆ ಗ್ರಾಮದ ಶ್ರೀನಿವಾಸ್, ದೇವೇಂದ್ರ ಎಂಬುವರು ರೈತರು ಹನಗೋಡು ಹೋಬಳಿಯ ಸಣ್ಣೇನಹಳ್ಳಿಯಲ್ಲಿ ಒಟ್ಟು 15 ಎಕರೆ ಜಮೀನನ್ನು 6 ತಿಂಗಳ ಹಿಂದೆ ಗುತ್ತಿಗೆ ಪಡೆದು ಶುಂಠಿ ಬೆಳೆಯನ್ನು ಬೆಳೆದಿದ್ದರು. ಶುಂಠಿ ಬೆಳೆ ಉತ್ತಮವಾಗಿ ಬಂದಿದ್ದು, ಶನಿವಾರ ರಾತ್ರಿ ಕಳ್ಳರು ಅರ್ಧ ಎಕರೆ ಶುಂಠಿ ಬೆಳೆಯನ್ನು ಕಳುವು ಮಾಡಿಕೊಂಡು ಹೋಗಿದ್ದಾರೆ.