More

    ಸಮಾಜಕ್ಕಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಉಳಿಯುತ್ತಾರೆ – ಸಚಿವೆ ಹೆಬ್ಬಾಳಕರ್

    Must Read

    ಬೆಳಗಾವಿ: ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಕೆಲಸ ಮಾಡಿದವರನ್ನು ಸಮಾಜ ಬಹುಬೇಗ ಮರೆಯುತ್ತದೆ. ಸಮಾಜಕ್ಕಾಗಿ, ಪ್ರಜೆಗಳ ಒಳಿತಿಗಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಶುಕ್ರವಾರ ಸಂಜೆ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಅಸೋಸಿಯೇಶನ್ ಆಯೋಜಿಸಿದ್ದ ಎಂಜಿನಿಯರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಜೀವಿಗಳಿಗೆ ಸಾಧಿಸುವ ಛಲ ಇರುತ್ತದೆ. ಚಂದ್ರಯಾನ ಯಶಸ್ವಿ ಮಾಡುವಲ್ಲಿ ಶೇ.30ಕ್ಕಿಂತ ಹೆಚ್ಚು ಮಹಿಳೆಯರ, ಅದರಲ್ಲೂ ಗ್ರಾಮೀಣ ಮಹಿಳೆಯರ ಕೊಡುಗೆ ಇದೆ ಎನ್ನುವುದು ನಮಗೆ ಹೆಮ್ಮೆಯ ಸಂಗತಿ ಎಂದರು. ಎಂಜಿನಿಯರ್ಸ್ ಇಲ್ಲದ ದೇಶವನ್ನು, ನಾಡನ್ನು ನಾವು ಊಹಿಸಿಕೊಳ್ಳಲೂ ಸಾಧ್ಯವಾಗುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟದಲ್ಲಿದ್ದ ಈ ನಾಡನ್ನು ಅತ್ಯದ್ಭುತವಾಗಿ ಕಟ್ಟಿ ನಿಲ್ಲಿಸಿದ ಕೀರ್ತಿ ಎಂಜಿನಿಯರ್ ಗಳಿಗೆ ಸಲ್ಲುತ್ತದೆ.  ಸರಕಾರ ಕೆಲಸ ಮಾಡಲು ಆದೇಶಿಸಬಹುದು, ಹಣ ಕೊಡಬಹುದು,  ಆದರೆ ಆ ಕೆಲಸವನ್ನು ಜಾರಿಗೊಳಿಸಬೇಕಾದವರು ಎಂಜಿನಿಯರ್ ಗಳು. ಶೃದ್ಧೆ, ನಿಷ್ಠೆಯಿಂದ ಎಂಜಿನಿಯರ್ ಗಳು ಆ ಕೆಲಸವನ್ನು ಪೂರೈಸುತ್ತಾರೆ. ಆಗ ಅದ್ಭುತವಾದ ಕಟ್ಟಡವೋ, ಸೇತುವೆಯೋ, ರಸ್ತೆಯೋ ನಿರ್ಮಾಣವಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು. ಹೆಚ್ಚಿನ ಜ್ಞಾನ, ಕೌಶಲ್ಯ, ಸಾಮರ್ಥ್ಯ ಅಥವಾ ಮಹತ್ವಾಕಾಂಕ್ಷೆಯೊಂದಿಗೆ ಮಾಡುವ ಎಲ್ಲಾ ಕೆಲಸವೂ ಹೆಚ್ಚಿನ ಪ್ರತಿಫಲವನ್ನು ನೀಡುತ್ತದೆ. ಹಾಗಾಗಿ ನಾವು ಏನನ್ನು ಮಾಡುತ್ತೇವೋ ಅದರಲ್ಲಿ ನಮ್ಮನ್ನು ಸಂಪೂರ್ಣ ತೊಡಗಿಸಿಕೊಳ್ಳಬೇಕು. ಎಂಜಿನಿಯರ್ ಗಳು ಹಗಲು, ರಾತ್ರಿ ಎನ್ನದೆ, ಬಿಸಿಲು, ಮಳೆ, ಚಳಿ ಎನ್ನದೆ ತಮ್ಮನ್ನು ತೊಡಗಿಸಿಕೊಂಡು ಕೆಲಸ ಮಾಡಿದ್ದರಿಂದ ಇಂತಹ ಅದ್ಭುತ ನಾಡು ನಿರ್ಮಾಣವಾಗಿದೆ ಎಂದು ಅವರು ಸಚಿವೆ ಹೆಬ್ಬಾಳಕರ್ಪ್ರಶಂಸಿಸಿದರು. ಸಾಧಕ ಎಂಜಿನಿಯರ್ ಗಳನ್ನು ಈ ಸಂದರ್ಭದಲ್ಲಿ ಸಚಿವರು ಸನ್ಮಾನಿಸಿದರು. ಎಂಜಿನಿಯರ್ಸ್ ಅಸೋಸಿಯೇಶನ್ ಚೇರಮನ್ ರಮೇಶ ಜಂಗಲ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಎಂಜಿನಿಯರ್ ವಿ.ಬಿ.ಜಾವೂರ್, ಸಂಘದ ಗೌರವ ಕಾರ್ಯದರ್ಶಿ ವೀರಣ್ಣ, ಇಸ್ರೋದ ಹಿರಿಯ ವಿಜ್ಞಾನಿಗಳಾದ ರಾಮನಗೌಡ ನಾಡಗೌಡ, ಶ್ರೀನಿವಾಸ ವೇದಿಕೆಯಲ್ಲಿದ್ದರು

    - Advertisement -spot_img
    - Advertisement -spot_img

    Latest News

    ಮಗನನ್ನು ಮೊಸಳೆ ಬಾಯಿಗೆಸೆದ ತಾಯಿ!

    ಪತಿ ಮೇಲಿನ ಸಿಟ್ಟಿಗೆ ಕರುಳಕುಡಿ ಹತ್ಯೆ ದಾಂಡೇಲಿಯಲ್ಲಿ ಅಮಾನವೀಯ ಕೃತ್ಯ ದಾಂಡೇಲಿ: ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗನನ್ನೇ ತಾಯಿಯೊಬ್ಬಳು ಮೊಸಳೆ ಬಾಯಿಗೆ ಎಸೆದ ಹೃದಯವಿದ್ರಾವಕ ಘಟನೆಗೆ...
    - Advertisement -spot_img

    More Articles Like This

    - Advertisement -spot_img