More

    ಸಮಾನತೆಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ

    ಭದ್ರಾವತಿ: ಮಹಿಳೆ ಮತ್ತು ಪುರುಷರಿಬ್ಬರು ಸಮಾನತೆಯಿಂದ ದುಡಿಮೆಯಲ್ಲಿ ಸಕ್ರಿಯರಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
    ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಸಿದ್ಧಾರೂಢನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಕಾರ್ಯಾಗಾರ, ಸರ್ಕಾರಿ ನೌಕರರ ತಾಲೂಕು ಮಟ್ಟದ ಸಮ್ಮೇಳನ ಮತ್ತು ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
    ಸರ್ಕಾರಿ ನೌಕರರು ಮಹಿಳಾ ದಿನ ಆಚರಿಸುವ ಮೂಲಕ ಸಮಾಜದಲ್ಲಿ ಸಮಾನ ದುಡಿಮೆ ಪರಿಕಲ್ಪನೆ ಮೂಡಿಸುತ್ತಿರುವುದು ಶ್ಲಾಘನೀಯ. 12ನೇ ಶತಮಾನದಲ್ಲಿಯೇ ಅಕ್ಕ ಮಹಾದೇವಿ ಸಮಾಜದಲ್ಲಿ ಸೀ ಮತ್ತು ಪುರುಷರ ನಡುವಿನ ಸಮಾನತೆಗಾಗಿ ಶ್ರಮಿಸಿದ್ದರು. ಇಂತಹ ಆದರ್ಶ ಮಹಿಳೆಯ ಸುಮಾರು 60 ಅಡಿ ಎತ್ತರದ ಪ್ರತಿಮೆಯನ್ನು ಅವರ ಜನ್ಮಸ್ಥಳ ಶಿಕಾರಿಪುರ ಉಡುತಡಿಯಲ್ಲಿ ಸುಮಾರು 1 ಎಕರೆ ಜÁಗದಲ್ಲಿ ಪ್ರತಿಷ್ಠಾಪಿಸಲಾಗಿದ್ದು 17ರಂದು ಲೋಕಾರ್ಪಣೆ ಮಾಡಲಾಗುವುದು. ಸರ್ಕಾರಿ ನೌಕರರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕ್ಷೇತ್ರದ ಬೆಳವಣಿಗೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಸರ್ಕಾರಿ ನೌಕರರ ಬಹಳಷ್ಟು ಬೇಡಿಕೆಗಳು ಈಡೇರುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಸಹಕಾರ ಹೆಚ್ಚಿನದ್ದಾಗಿದೆ. ಇತ್ತೀಚೆಗೆ ನೇ ವೇತನ ಆಯೋಗ ಜಾರಿ ಹಾಗೂ ಎನ್‍ಪಿಎಸ್ ರದ್ದುಗೊಳಿಸಲು ಒತ್ತಾಯಿಸಿ ನಡೆಸಿದ ಹೋರಾಟದ ಪರಿಣಾಮವಾಗಿ ಶೇ.17 ವೇತನ ಹೆಚ್ಚಳವಾಗಿದೆ. ಎನ್‍ಪಿಎಸ್ ರದ್ದುಗೊಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ ವರದಿ ಪಡೆಯುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದರು.
    ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಮಾತನಾಡಿ, ವಿಇಎಸ್ ವಿದ್ಯಾಸಂಸ್ಥೆ ಆಡಳಿತ ಭವನ ನಿರ್ಮಾಣಕ್ಕೆ 1 ಕೋಟಿ ರೂ., ಗುರುಭವನ ನಿರ್ಮಾಣಕ್ಕೆ 2 ಕೋಟಿ ರೂ. ಮತ್ತು ಸಿಲ್ವರ್ ಜ್ಯೂಬಿಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನೂತನ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂ. ಸೇರಿದಂತೆ ಒಟ್ಟು 6 ಕೋ.ರೂ ವೆಚ್ಚದ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿಕೊಡುವಲ್ಲಿ ಸಂಘದ ಅಧ್ಯಕ್ಷರು, ಸಂಸದರು, ಶಾಸಕರ ಪ್ರಯತ್ನ ಹೆಚ್ಚಿನದ್ದಾಗಿದೆ. ಶಿವಮೊಗ್ಗ ನಗರದಂತೆ ಭದ್ರಾವತಿ ಸಹ ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಸಂಸದರು ಹೆಚ್ಚಿನ ಗಮನ ನೀಡಬೇಕೆಂದು ಮನವಿ ಮಾಡಿದರು.
    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್, ಬಿಇಒ ಎ.ಕೆ.ನಾಗೇಂದ್ರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts