More

    ಸಮಾವೇಶದಲ್ಲಿ 15 ಸಾವಿರ ಯುವಕರು ಭಾಗಿ

    ಹುಕ್ಕೇರಿ: ಪಟ್ಟಣದ ವಿಶ್ವರಾಜ ಸಭಾಭವನದಲ್ಲಿ ಮಾ. 24ರಂದು ಹಮ್ಮಿಕೊಂಡಿರುವ ಯುವ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಯುವಕರು ಪಾಲ್ಗೊಳ್ಳಲಿದ್ದಾರೆ ಎಂದು ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಪಥ್ವಿ ರಮೇಶ ಕತ್ತಿ ಹೇಳಿದರು. ಪಟ್ಟಣದ ಪಿಕಾರ್ಡ್ ಬ್ಯಾಂಕಿನಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಯುವ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಗಮಿಸಲಿದ್ದಾರೆ ಎಂದರು.

    ಸಮಾವೇಶದಲ್ಲಿ ಹುಕ್ಕೇರಿ ತಾಲೂಕಿನ ಕಣಗಲಾ ಪ್ರದೇಶದಲ್ಲಿ ಮಾಜಿ ಸಚಿವ ಉಮೇಶ ಕತ್ತಿ ಪ್ರಯತ್ನದಿಂದ 1000 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಕೈಗಾರಿಕಾ ಘಟಕಗಳಲ್ಲಿ 200 ಎಕರೆ ಗ್ಲಾಸ್ ಕಾರ್ಖಾನೆ ಉದ್ಯೋಗ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಯುವಕರಿಗೆ ಜಾರಿಗೆ ತಂದಿರುವ ಯೋಜನೆಗಳು, ಮೇಕ್ ಇನ್ ಇಂಡಿಯಾ ಸೇರಿ ಇತರ ಯೋಜನೆ ಕುರಿತು ಚರ್ಚೆ ನಡೆಯಲಿದೆ ಎಂದರು.

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಜ್ವಲ ನಿಲಜಗಿ ಮಾತನಾಡಿದರು. ಮೋರ್ಚಾ ಉಪಾಧ್ಯಕ್ಷ ಸುಹಾಸ ನೂಲಿ, ಪ್ರಕೋಷ್ಠದ ಸಂಚಾಲಕ ಪ್ರಭಾಕರ ಹಂಚಿನಾಳೆ, ಹಾಲಪ್ಪ ಗಡದವರ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ, ಬಸವರಾಜ ಮರಡಿ, ಸುರೇಶ ದೊಡ್ಡಲಿಂಗನವರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts