ದಾಂಡೇಲಿ: ಇಲ್ಲಿನ ನಗರಸಭೆಯ ಅಧ್ಯಕ್ಷೆಯಾಗಿ ಕಾಂಗ್ರೆಸ್ನ ಸರಸ್ವತಿ ರಜಪೂತ್ ಹಾಗೂ ಉಪಾಧ್ಯಕ್ಷರಾಗಿ ಸಂಜಯ ನಂದ್ಯಾಳಕರ್ ಆಯ್ಕೆಯಾದರು.
ಭಾನುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಪದ್ಮಜಾ ಜನ್ನು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವಿಷ್ಣು ವಾಜವೆ ಸ್ಪರ್ಧಿಸಿದ್ದರು. ಕಾಂಗ್ರೆಸ್ನ 16 ಮತ್ತು ನಾಲ್ವರು ಪಕ್ಷೇತರರ ಬೆಂಬಲ, ಶಾಸಕ ಆರ್.ವಿ. ದೇಶಪಾಂಡೆ ಅವರ ಮತ ಸೇರಿ 21 ಮತಗಳನ್ನು ಸರಸ್ವತಿ ರಜಪೂತ್ ಹಾಗೂ ಸಂಜಯ ನಂದ್ಯಾಳಕರ್ ಪಡೆದರು. ಬಿಜೆಪಿ ಸ್ಪರ್ಧಿಗಳು 11 ಮತಗಳನ್ನು ಪಡೆದರು.
ನಗರದ ಅಭಿವೃದ್ಧಿಗೆ ಸಹಕರಿಸಿ: ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಆರ್.ವಿ. ದೇಶಪಾಂಡೆ ಅವರು, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸರಸ್ವತಿ ರಜಪೂತ ಅತ್ಯಂತ ಬಡ ಕುಟುಂಬಕ್ಕೆ ಸೇರಿದವರು. ಕಾಂಗ್ರೆಸ್ ಪಕ್ಷದಿಂದ ನಗರಸಭೆಗೆ ಎರಡು ಬಾರಿ ಆಯ್ಕೆಯಾಗಿ 1 ಬಾರಿ ನಾಮ ನಿರ್ದೇಶಿತ ಸದಸ್ಯೆಯಾಗಿ ಆಯ್ಕೆಯಾಗಿ ಅನುಭವ ಪಡೆದಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂಜಯ ಸಿ. ನಂದ್ಯಾಳಕರ್ ಪಕ್ಷೇತರವಾಗಿ ಆಯ್ಕೆಯಾದರೂ ನಂತರ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಯುವ ಜನರಿಗೆ ಪ್ರಾಧ್ಯಾನ್ಯತೆ ನೀಡುವ ದೃಷ್ಟಿಯಿಂದ ಸಂಜಯ ಅವರನ್ನು ಆಯ್ಕೆ ಮಾಡಲಾಗಿದೆ. ನಗರಸಭೆಯ ಎಲ್ಲ ಸದಸ್ಯರು ಪಕ್ಷಭೇದ ಮರೆತು ನಗರದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.