More

    ಸರ್ವರಿಗೂ ಯೋಗ ಸದುಪಯೋಗವಾಗಲಿ

    ಶ್ರೀರಂಗಪಟ್ಟಣ: ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯೋಗ ದಸರಾವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮೀ ಸಲಹೆ ನೀಡಿದರು.

    ಶ್ರೀರಂಗ ವೇದಿಕೆಯಲ್ಲಿ ಆಯೋಜಿಸಿದ್ದ ಯೋಗ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಪ್ರತಿನಿತ್ಯ ಯೋಗಾಭ್ಯಾಸ ಮಾಡಿದರೆ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯಯುತವಾಗಿರುವ ಅನೇಕ ಉದಾಹರಣೆ ನಮ್ಮ ಮುಂದೆ ಇದೆ ಎಂದು ಹೇಳಿದರು.
    ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಆರೋಗ್ಯದ ಸುಧಾರಣೆಯಲ್ಲಿ ಯೋಗದ ಪಾತ್ರ ಅಪಾರ. ಜೂ.21ರಂದು ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ 8 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಯೋಗ ಮಾಡಿ ಜಿಲ್ಲೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

    ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷೆ ನಿರ್ಮಲಾ ಮಾತನಾಡಿದರು. ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ಯೋಗಶಿಕ್ಷಕ ಶಂಕರನಾರಾಯಣ ಶಾಸ್ತ್ರೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts