ಕಡಬ : ಪುತ್ತೂರು -ಕಾಣಿಯೂರು ರೈಲು ಮಾರ್ಗ ಮದ್ಯೆ ಸವಣೂರು ಗೇಟ್ ಬಳಿಯ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ
ಪುಣ್ಚಪ್ಪಾಡಿ ಗ್ರಾಮದ ದೇವಸ್ಯ ದಂಬೆ ನಿವಾಸಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿ.ಬಾಲಕೃಷ್ಣ ರೈ ಕೇನ್ಯ ಎಂಬವರ ಪುತ್ರ ಮಹೇಶ್ (34 ವ) ಎಂಬವರ ಶವ ಎಂದು ತಿಳಿದುಬಂದಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದಿರಬಹುದು ಎಂದು ಅಂದಾಜಿಸಲಾಗಿದೆ . ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.