More

    ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

    ಕೆ.ಆರ್.ನಗರ: ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಉಪಾಧ್ಯಾಯರ ಸಹಕಾರ ಸಂಘದ ಅಧ್ಯಕ್ಷರಾಗಿ ತುಳಸಿರಾಮನಾಯಕ ಹಾಗೂ ಉಪಾಧ್ಯಕ್ಷರಾಗಿ ಕುಮಾರ ಅವಿರೋಧವಾಗಿ ಆಯ್ಕೆಯಾದರು.

    ಪಟ್ಟಣದ ವಿನಾಯಕ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲಾ ಉಪಾಧ್ಯಾಯರ ಸಹಕಾರ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತುಳಸಿರಾಮನಾಯಕ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರ್ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ರವಿ ಅವಿರೋಧ ಆಯ್ಕೆ ಘೋಷಿಸಿದರು.

    ನೂತನ ಅಧ್ಯಕ್ಷ ತುಳಸಿರಾಮನಾಯಕ ಮಾತನಾಡಿ, ಎಲ್ಲರ ವಿಶ್ವಾಸದೊಂದಿಗೆ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ. ಸಕಾಲದಲ್ಲಿ ಸದಸ್ಯರಿಗೆ ಸಾಲ ಸೌಲಭ್ಯ ನೀಡುವ ಜತೆಗೆ ಇನ್ನಿತರ ಕಾರ್ಯ ಚಟುವಟಿಕೆಯಲ್ಲೂ ಪಾಲ್ಗೊಳ್ಳುವಂತೆ ಕ್ರಮವಹಿಸಲಾಗುವುದು. ಈಗಿರುವ ಕಚೇರಿ ಚಿಕ್ಕದಾಗಿದ್ದು, ಬೇರೊಂದು ಕಡೆಗೆ ವಿಶಾಲ ಸ್ಥಳಕ್ಕೆ ಕಚೇರಿಯನ್ನು ಸ್ಥಳಾಂತರಿಸಲಾಗುವುದು. ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಇನ್ನಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

    ನಿಕಟಪೂರ್ವ ಅಧ್ಯಕ್ಷ ಮಂಜೇಗೌಡ, ಉಪಾಧ್ಯಕ್ಷ ಫಣಿರಾಜ್, ನಿರ್ದೇಶಕರಾದ ಶಂಕರೇಗೌಡ, ಡಿ.ಜೆ.ಕುಮಾರ್, ಬಿ.ಆರ್.ಕುಮಾರ್, ಬಿ.ಕಾಂತರಾಜ್, ಎಂ.ಕುಮಾರ್, ಬಿ.ಆರ್.ಮನು, ಟಿ.ಜಿ.ಸತೀಶ, ಎಂ.ಎನ್.ರಾಧಾ, ಡಿ.ರುಕ್ಷ್ಮಿಣಿ, ಎಂ.ಪಿ.ನಂಜುಂಡ, ಪ್ರಸನ್ನ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts