More

    ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದಿರಲಿ

    ಬೇಲೂರು: ಗಾಂಧಿ ಜಯಂತಿ ಅಂಗವಾಗಿ ಪಟ್ಟಣದ ಶ್ರೀ ಶಂಕರಲಿಂಗೇಶ್ವರ ದೇಗುಲ ಆವರಣವನ್ನು ಭಾನುವಾರ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಸ್ವಚ್ಛಗೊಳಿಸಿದರು.

    ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡತ್ತಿವೆ. ಪರಸಭೆ ಸಿಬ್ಬಂದಿ ಎಷ್ಟೇ ಸ್ವಚ್ಛಗೊಳಿಸಿದರೂ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುವುದನ್ನು ಬಿಡುತ್ತಿಲ್ಲ. ಇದರಿಂದ ಹೆಚ್ಚು ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುರಸಭೆಯಿಂದ ಅಭಿಯಾನ ನಡೆಸಲಾಗುತ್ತಿದೆ ಎಂದು ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು.

    ಪಟ್ಟಣದ ಎಲ್ಲ ವಾರ್ಡ್‌ಗಳು ಹಾಗೂ ದೇಗುಲಗಳ ಆವರಣವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಇದರ ಭಾಗವಾಗಿ ಶಂಕರಲಿಂಗೇಶ್ವರ ದೇಗುಲ ಆವರಣವನ್ನು ಸ್ವಚ್ಛಗೊಳಿಸಲಾಗಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಮುಂದಾಗಬೇಕು ಎಂದರು.

    ಪುರಸಭೆ ಉಪಾಧ್ಯಕ್ಷೆ ಸೌಮ್ಯ ಸುಬ್ರಹ್ಮಣ್ಯ, ಆರೋಗ್ಯಾಧಿಕಾರಿ ಜ್ಯೋತಿ, ಮತ್ತು ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts