More

    ಸಾಲ ಬಾಧೆಗೆ ರೈತ ಆತ್ಮಹತ್ಯೆ

    ಹಿರೇಕೆರೂರ: ಸಾಲದ ಬಾಧೆಗೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಬಲೂರು ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

    ಗ್ರಾಮದ ಉಜ್ಜಪ್ಪ ಬಸವಣ್ಣೆಪ್ಪ ಮಳವಳ್ಳಿ (64) ಮೃತ ರೈತ. ಸಾಲಮಾಡಿ 2 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಅತಿವೃಷ್ಟಿಗೆ ಹಾಳಾಗಿತ್ತು. ಇದರಿಂದ ಮಾಡಿದ ಸಾಲವನ್ನು ಹೇಗೆ ತೀರಿಸಬೇಕು ಎಂಬ ಚಿಂತೆಯಲ್ಲಿ ಮನೆಯ ಹಿತ್ತಲಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರು ಕೋಡ ಗ್ರಾಮದ ಕೆ.ವಿ.ಜಿ. ಬ್ಯಾಂಕಿನಲ್ಲಿ 2 ಲಕ್ಷ ರೂ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ 1.50 ಲಕ್ಷ ರೂ. ಹಾಗೂ ಕೈಗಡವಾಗಿ 3 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts