More

    ಸಿಎಎ ಕುರಿತು ತಪ್ಪು ಮಾಹಿತಿ

    ಮಳವಳ್ಳಿ: ಸ್ವಾತಂತ್ರ್ಯ ಬಂದಾಗ ಭಾರತದಲ್ಲಿ ಶೇ.3ರಷ್ಟಿದ್ದ ಮುಸಲ್ಮಾನರ ಸಂಖ್ಯೆ ಪ್ರಸ್ತುತ ಶೇ.15ಕ್ಕೆ ತಲುಪಿದೆ. ಆದರೆ, ಪಾಕಿಸ್ತಾನ ಮತ್ತು ಅರಬ್ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತ ಹಿಂದುಗಳ ಪರಿಸ್ಥಿತಿ ಹೇಳತೀರದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಹೇಳಿದರು.

    ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜನಜಾಗೃತಿ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಎಡಪಂಥೀಯರು ಹಾಗೂ ಕಾಂಗ್ರೆಸ್‌ನವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಯ್ದೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.

    ಇಂತಹ ಅಪಪ್ರಚಾರಗಳನ್ನು ಹತ್ತಿಕ್ಕಲೂ ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಸಂಘಟಿತರಾಗಿ ಜನರಲ್ಲಿ ಅರಿವು ಮೂಡಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಜಾಗೃತಿ ಆಂದೋಲನ ನಡೆಸಲು ಎಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಿದರು.

    ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಚುಡಾ ಮಾಜಿ ಅಧ್ಯಕ್ಷ ಬಾಲಸುಬ್ರಮಣ್ಯ, ಪುರಸಭೆ ಸದಸ್ಯರಾದ ರವಿ, ಕೃಷ್ಣ, ತಾಲೂಕು ಬಿಜೆಪಿ ಮುಖಂಡರಾದ ಅಶೋಕ್, ಕುಮಾರ್, ಬಸವರಾಜು, ಪ್ರಸಾದ್, ಶಿವಲಿಂಗೇಗೌಡ, ಕೆ.ಸಿ.ನಾಗೇಗೌಡ, ಅಪ್ಪಾಜಿಗೌಡ, ಶಿವಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts