ಬ್ಯಾಕೋಡು: ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವಕ್ಕೆ ಕೇರಳದ ವರ್ಕಳ ಶಿವಗಿರಿ ಮಠದ ಶ್ರೀ ನಿತ್ಯಾನಂದ ತೀರ್ಥರು ಚಾಲನೆ ನೀಡಿದರು. ಧರ್ಮದರ್ಶಿ ಡಾ. ಎಸ್.ರಾಮಪ್ಪ, ಮೀನಾಕ್ಷಮ್ಮ ದಂಪತಿ ಪಾದಪೂಜೆ ನೆರವೇರಿಸಿದರು. ಬಳಿಕ ಶ್ರೀಗಳು ಆಶೀರ್ವಚನ ನೀಡಿದರು. ದೇವಿ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೆರವೇರಿದವು.