More

    ಸಿದ್ದಾಪುರ ಪಪಂಗೆ ಚಂದ್ರಕಲಾ ಅಧ್ಯಕ್ಷೆ

    ಸಿದ್ದಾಪುರ: ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಬಿಜೆಪಿಯ ಚಂದ್ರಕಲಾ ಸುರೇಶ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ರವಿಕುಮಾರ ವೆಂಕಟ್ರಮಣ ನಾಯ್ಕ ಅವಿರೋಧವಾಗಿ ಸೋಮವಾರ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಮಂಜುಳಾ ಎಸ್. ಭಜಂತ್ರಿ ಕಾರ್ಯನಿರ್ವಹಿಸಿದರು.

    15 ಸದಸ್ಯ ಬಲದ ಪಪಂನಲ್ಲಿ ಬಿಜೆಪಿ 14, ಕಾಂಗ್ರೆಸ್ 1 ಸ್ಥಾನ ಹೊಂದಿದೆ. ಬಹುಮತವಿದ್ದ ಕಾರಣ ಅಧ್ಯಕ್ಷ/ಉಪಾಧ್ಯಕ್ಷರಿಬ್ಬರೂ ಬಿಜೆಪಿ ಯವರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ ಬಂದಿದ್ದು, 4 ಸದಸ್ಯರು ಬಿಜೆಪಿಯಲ್ಲಿದ್ದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಬಂದಿದ್ದರಿಂದ ಎಲ್ಲ ಸದಸ್ಯರೂ ಅರ್ಹತೆ ಹೊಂದಿದ್ದರು. ಆದರೆ, ಬಿಜೆಪಿ ಮುಖಂಡರು ಸದಸ್ಯರ ಅಭಿಪ್ರಾಯ ಪಡೆದು ಅಂತಿಮವಾಗಿ ಚಂದ್ರಕಲಾ ನಾಯ್ಕ, ರವಿಕುಮಾರ ನಾಯ್ಕ ಅವರನ್ನು ಆಯ್ಕೆ ಮಾಡಿದ್ದಾರೆ. ಪಪಂನ ಎಲ್ಲ 15 ಸದಸ್ಯರು ಆಯ್ಕೆ ಸಂದರ್ಭದಲ್ಲಿ ಇದ್ದರು. ನೂತನ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ ಮಾತನಾಡಿ, ಪಪಂ ಹಿರಿಯ ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಮಾರ್ಗದರ್ಶನ, ಎಲ್ಲ ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿ ಮಾಡಲಾಗವುದು ಎಂದರು. ಸದಸ್ಯ ಕೆ.ಜಿ. ನಾಯ್ಕ ಹಣಜೀಬೈಲ್ ಮಾತನಾಡಿ, ಪಟ್ಟಣದ ಜನರು ನಮ್ಮ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರ ಮತ್ತು ಉಸ್ತುವಾರಿ ಸಚಿವರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿ ಮಾಡುತ್ತೇವೆ ಎಂದರು. ಉಪಾಧ್ಯಕ್ಷ ರವಿಕುಮಾರ ನಾಯ್ಕ ಮಾತನಾಡಿದರು. ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ, ಪ್ರ.ಕಾ. ಪ್ರಸನ್ನ ಹೆಗಡೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts