More

    ಸಿದ್ದು ಶ್ವೇತ ಪತ್ರ ಹೊರಡಿಸಲಿ,ಸವಾಲು

    ಚಿತ್ರದುರ್ಗ: ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗುವುದು ಶೇ.100 ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.
    ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ದೇಶಕ್ಕೆ ಅಕ್ಷಯ ಪಾತ್ರೆ ಕೊಟ್ಟಿದ್ದಾರೆ, ಜನರಿಗೆ ಚಿಪ್ಪು ಕೊಟ್ಟಿಲ್ಲವೆಂದು ಕಾಂಗ್ರೆಸ್ಸಿನ ಚೊಂಬು ಟೀಕೆಗೆ ತಿರುಗೇಟು ನೀಡಿದರು.
    ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ. ಅಪರಾಧ ಪ್ರಕರಣಗಳ ಸಂಖ್ಯೆ ಶೇ.43 ಹಾಗೂ ಸೈಬರ್ ಅಪರಾಧ ಸಂಖ್ಯೆ ಶೇ.41 ಹೆಚ್ಚಾಗಿದೆ ಎಂದು ದೂರಿದರು.
    ಪ್ರಧಾನಿಯಾಗಿದ್ದ ಮನಮೋಹನ್‌ಸಿಂಗ್ ಅವರು ತಮ್ಮ 10 ವರ್ಷಗಳ ಆಡಳಿತಾವಧಿ ಕರ್ನಾಟಕಕ್ಕೆ 82 ಸಾವಿರ ಕೋಟಿ ರೂ. ತೆರಿಗೆ ಪಾಲು ಕೊಟ್ಟಿದ್ದರೆ, ಮೋದಿ ಆಡಳಿತಾವಧಿ 3 ಲಕ್ಷ ಕೋಟಿ ರೂ. ಬಂದಿದೆ. ತೆರಿಗೆ ವಿಚಾರದಲ್ಲಿ ಅನ್ಯಾಯ ಆಗಿದೆ ಎನ್ನುತ್ತಿರುವ ನೀವು ಶ್ವೇತಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.
    ಗ್ಯಾರಂಟಿಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಿಸಲಾಗಿದೆ. ಖಜಾನೆ ಖಾಲಿ ಆಗಿದೆ. ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದರು.
    ಅಭ್ಯರ್ಥಿ ಗೋವಿಂದ ಎಂ.ಕಾರಜೋಳ, ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಂಎಲ್‌ಸಿ ಕೆ.ಎಸ್.ನವೀನ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts