More

    ಸಿದ್ಧಗಂಗಾ ಶ್ರೀಗಳ ಕಾರ್ಯ ಸಮಾಜಕ್ಕೆ ಮಾದರಿ

    ಕೆ.ಆರ್.ನಗರ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಶ್ರೀಗಳ ಜನ್ಮ ದಿನವನ್ನು ತಾಲೂಕು ವೀರಶೈವ-ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

    ಪಟ್ಟಣದ ಗರುಡಗಂಭ ವೃತ್ತದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸಮಾಜದ ಸಂಘ-ಸಂಸ್ಥೆಗಳ ಮತ್ತು ನಾಗರಿಕರು ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.

    ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ, ಅನ್ನದಾನ ಮಾಡಿದ ಶ್ರೀಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

    ಬಸವೇಶ್ವರ ಜ್ಞಾನಜ್ಯೋತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಚಂದ್ರಶೇಖರ್, ಪುರಸಭಾ ಸದಸ್ಯರಾದ ಕೆ.ಪಿ.ಪ್ರಭುಶಂಕರ್, ತೋಂಟದಾರ್ಯ, ನಾಮಧಾರಿ ಸಮಾಜದ ಗೌರವಾಧ್ಯಕ್ಷ ಡೈರಿ ಪ್ರಕಾಶ್, ಸರ್ಕಾರಿ ನೌಕರ ಸಂಘದ ನಿರ್ದೇಶಕ ಶಂಕರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಮಾಜಿ ಅಧ್ಯಕ್ಷ ಕೃಷ್ಣನಾಯಕ್, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷರಾದ ಅರುಣ್ ಬಿ.ನರಗುಂದ, ಎಸ್.ವಿ.ಪ್ರಕಾಶ್, ಜಗದೀಶ್, ಮಹಿಳಾ ಘಟಕದ ಅಧ್ಯಕ್ಷೆ ಮನೋಹರಿ, ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ವಕೀಲ ಮಹೇಶ್, ಕೊಡಿಯಾಲ ಶಿವಕುಮಾರ್, ಸಂಘದ ಪದಾಧಿಕಾರಿಗಳಾದ ಚನ್ನಬಸಪ್ಪ, ಚಂದ್ರಶೇಖರ್, ಗಂಗಾಧರ್, ಪುಟ್ಟರಾಜು, ಯೋಗಾನಂದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts