More

    ಸುಗ್ನಳ್ಳಿ-ವಡವಿಹೊಸೂರು ರಸ್ತೆ ದುರಸ್ತಿಗೊಳಿಸಿ

    ಶಿರಹಟ್ಟಿ: 20 ವರ್ಷಗಳಿಂದ ದುರಸ್ತಿ ಭಾಗ್ಯ ಕಾಣದ ಸುಗ್ನಳ್ಳಿ-ವಡವಿಹೊಸೂರ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಬನ್ನಿಕೊಪ್ಪ ಗ್ರಾಪಂ ಸದಸ್ಯರು ಶನಿವಾರ ಶಾಸಕ ರಾಮಣ್ಣ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.

    ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಮಾತನಾಡಿ, ‘ಸುಗ್ನಳ್ಳಿಯಿಂದ ವಡವಿಹೊಸೂರ ಗ್ರಾಮದವರೆಗಿನ 6 ಕಿಮೀ ರಸ್ತೆ ಕಳೆದ 20 ವರ್ಷಗಳಿಂದ ದುರಸ್ತಿಯಾಗದೇ ಸಂಪೂರ್ಣ ಹದಗೆಟ್ಟಿದೆ. ಚಕ್ಕಡಿ, ಟ್ರ್ಯಾಕ್ಟರ್ ಸೇರಿ ಇತರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ಬಗ್ಗೆ ಗ್ರಾಮಸ್ಥರು ಹಾಗೂ ಹಿಂದಿನ ಗ್ರಾಪಂ ಆಡಳಿತ ಮಂಡಳಿ ಸದಸ್ಯರು ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಅಲ್ಲದೆ, ಸಂಬಂಧಿಸಿದ ಜಿಪಂ, ತಾಪಂ ಸದಸ್ಯರು ಈ ಬಗ್ಗೆ ಗಮನ ಹರಿಸದಿರುವುದು ಸ್ಥಳೀಯರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ’ ಎಂದರು.

    ಶೀಘ್ರವೇ ರಸ್ತೆ ಸುಧಾರಣೆಗೆ ಅನುದಾನ ನೀಡಿ ಕಾಮಗಾರಿ ಆರಂಭಿಸುವ ಮೂಲಕ ಉಭಯ ಗ್ರಾಮದ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿಸಬೇಕು ಎಂದು ಕೋರಿದರು. ಶಾಸಕ ರಾಮಣ್ಣ ಲಮಾಣಿ ಮಾತನಾಡಿ, ‘ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಸೂಚನೆ ನೀಡಿ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಹಣ ಮಂಜೂರಿಯಾದ ಕೂಡಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು.

    ಗ್ರಾಮ ಪಂಚಾಯಿತಿ ಸದಸ್ಯ ಅಡಿವೆಪ್ಪ ಆಡಿನ, ಗುಡದೀರಪ್ಪ ಹಂಸಿ, ವೀರನಗೌಡ ಪಾಟೀಲ, ಗ್ರಾಮದ ಪ್ರಮುಖರಾದ ವಿನಾಯಕ ಈಟಿ, ಮಲ್ಲಿಕಾರ್ಜುನ ಬಳ್ಳೊಳ್ಳಿ, ಶಿವಲಿಂಗಪ್ಪ ಜಕ್ಕಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts