ಬೆಳಗಾವಿ: ನಗರದ ಆರ್ಮಿ ಪರಿಸರ ಉದ್ಯಾನ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 17ರಂದು ಯೋಗಥಾನ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಯೋಗಥಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎನ್ಸಿಸಿ, ಎನ್ಎಸ್ಎಸ್, ಮಿಲಿಟರಿ ಯೋಧ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ, ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಇಲಾಖೆ, ನರೇಗಾ ಕಾರ್ಮಿಕರು ಹಾಗೂ ಇತರ ಯೋಗ ಸಂಸ್ಥೆಗಳು ಯೋಗಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಜಿನೇಶ್ವರ್ ಪಡನಾಡ ಮಾತನಾಡಿ,ಈಗಾಗಲೇ ಯೋಗಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನ್ ಲೈನ್ ಮೂಲಕ 1.22 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಶೈಕ್ಷಣಿಕ ೇತ್ರದಿಂದ 42 ಸಾವಿರ ಹಾಗೂ ಚಿಕ್ಕೋಡಿ ಭಾಗದಿಂದ 30 ಸಾವಿರ ವಿದ್ಯಾರ್ಥಿಗಳು ಸೇರದಂತೆ ಸುಮಾರು 80 ಸಾವಿರ ಶಾಲಾ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಈಗಾಗಲೇ ನೋಂದಣಿ ಮಾಡಿಕೊಂಡ ಸಂಸ್ಥೆಗಳು, ಅಭ್ಯರ್ಥಿಗಳ ಪ್ರವೇಶಕ್ಕೆ ಕ್ಯೂ.ಆರ್ ಕೋಡ್ ನೀಡಲಾಗುವುದು. ಶಾಲಾ, ಕಾಲೇಜು ಹಾಗೂ ಸಂಸ್ಥೆಗಳಿಗೆ ನೀಡಿರುವ ಕ್ಯೂ ಆರ್ ಕೋಡ್ ಮೂಲಕ 300 ಜನ ಪ್ರವೇಶ ಪಡೆಯಬಹುದು. ಅದೇ ರೀತಿಯಲ್ಲಿ ವೈಯಕ್ತಿಕವಾಗಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೀಡಿರುವ ಕ್ಯೂ ಆರ್ ಕೋಡ್ ಸ್ಕಾ$್ಯನ್ ಮೂಲಕ ಒಬ್ಬರಿಗೆ ಒಂದು ಬಾರಿ ಮಾತ್ರ ಪ್ರವೇಶ ಸಿಗಲಿದೆ. ನೋಂದಾಯಿತರಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಜಿಪಂ ಸಿಇಒ ದರ್ಶನ್ ಎಚ್.ವಿ., ಪಾಲಿಕೆ ಆರೋಗ್ಯ ಅಧಿಕಾರಿ ಡಾ.ಸಂಜಯ ಡುಮ್ಮಗೋಳ, ಆಯುಷ್ಯ ಇಲಾಖೆ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ, ಶೈಲಜಾ ಶ್ರೀಕಾಂತ ಇತರರಿದ್ದರು.