More

    ಸೊರಬದಲ್ಲಿ ತೀವ್ರಗೊಂಡ ಬಿಜೆಪಿ ಬಣ ವಿವಾದ: ಶಾಸಕ ಕುಮಾರ್ ಬಂಗಾರಪ್ಪ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು

    ಸೊರಬ: ಶಾಸಕ ಕುಮಾರ್ ಬಂಗಾರಪ್ಪ ಬೆಂಬಲಿಗರು ಬಿಜೆಪಿಯ ಹಿರಿಯ ಮುಖಂಡ ಎ.ಎಸ್.ಪದ್ಮನಾಭ್ ಭಟ್ ಮತ್ತು ನಮೋ ವೇದಿಕೆ ಅಧ್ಯಕ್ಷ ಪಾಣಿ ರಾಜಪ್ಪ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿದೆ.
    ಪಟ್ಟಣದಲ್ಲಿ ನಮೋ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎ.ಎಸ್.ಪದ್ಮನಾಭ ಭಟ್ ಹಾಗೂ ನಮೋ ವೇದಿಕೆ ಅಧ್ಯಕ್ಷ ಪಾಣಿ ರಾಜಪ್ಪ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಅರ್ಥದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರ್ ಬಂಗಾರಪ್ಪ ಅಭಿಮಾನಿ ಬಳಗದ ಪುರಸಭೆ ಸದಸ್ಯರಾದ ಎಂ.ಡಿ.ಉಮೇಶ್, ಪ್ರಭು ಮೇಸ್ತ್ರಿ, ಗ್ರಾಪಂ ಸದಸ್ಯ ಕನಕದಾಸ ಕಲ್ಲಂಬಿ ಮತ್ತು ಮಾಜಿ ಸದಸ್ಯ ರಮೇಶ್ ಕೊರಕೋಡು ಹೇಳಿಕೆ ನೀಡಿದ್ದಾರೆ. ಭಾನುವಾರ ಶ್ರೀ ರಂಗನಾಥ ದೇವಸ್ಥಾನ ಸಮೀಪದ ನಮೋ ವೇದಿಕೆ ಕಚೇರಿ ಮುಂಭಾಗದಲ್ಲಿ ಕನಕದಾಸ ಕಲ್ಲಂಬಿ ಮತ್ತಿತರರು ಪದ್ಮನಾಭ್ ಭಟ್ ಅವರನ್ನು ಪುನಃ ಸೊರಬಕ್ಕೆ ಕರೆಸಿದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದರೆ ಇವರೇ ನೇರ ಹೊಣೆ ಎಂದು ಸೊರಬ ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts