ಹಾವೇರಿ: ವೈದ್ಯ, ಲ್ಯಾಬ್ ಟೆಕ್ನಿಷಿಯನ್, ಬ್ಯಾಂಕ್, ಪೊಲೀಸ್ ಸಿಬ್ಬಂದಿ ಸೇರಿ ಜಿಲ್ಲೆಯಲ್ಲಿ ಭಾನುವಾರ 76 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, 95 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2486 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ 1628 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಹಾಗೂ ಆ. 16ರಂದು ಇಬ್ಬರು ಮರಣ ಪ್ರಕರಣ ಸೇರಿ ಒಟ್ಟಾರೆ 52 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. 384 ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಹಾಗೂ 419 ಸೋಂಕಿತರು ಕೋವಿಡ್ ಕೇರ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಒಟ್ಟಾರೆ 803 ಸಕ್ರಿಯ ಪ್ರಕರಣಗಳಿವೆ.
ಆ.16 ರಂದು ಹಾನಗಲ್ಲ -08, ಸವಣೂರ-05, ಬ್ಯಾಡಗಿ-01, ಹಿರೇಕೆರೂರ-10, ಶಿಗ್ಗಾಂವಿ-11, ರಾಣೆಬೆನ್ನೂರ-27 ಹಾಗೂ ಹಾವೇರಿ ತಾಲೂಕಿನಲ್ಲಿ 14 ಜನರಿಗೆ ಸೋಂಕು ದೃಢಪಟ್ಟಿದೆ. ಸವಣೂರ-04, ಶಿಗ್ಗಾಂವಿ-7, ರಾಣೆಬೆನ್ನೂರ-34, ಹಾವೇರಿ-20, ಬ್ಯಾಡಗಿ-07, ಹಾನಗಲ್ಲ-03, ಹಿರೇಕೆರೂರ-20 ಸೇರಿ ಒಟ್ಟು 95 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಸೋಂಕಿತರ ನಿವಾಸದ ಪ್ರದೇಶವನ್ನು ನಿಯಮಾನುಸಾರ ಕಂಟೈನ್ವೆುಂಟ್ ಜೋನ್ ಹಾಗೂ ಬಫರ್ ಜೋನ್ ಆಗಿ ಘೊಷಿಸಲಾಗಿದೆ. ಆಯಾ ತಹಸೀಲ್ದಾರ್ಗಳನ್ನು ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಿಸಲಾಗಿದೆ.
ಇಬ್ಬರು ಸಾವು: ಹಿರೇಕೆರೂರ ತಾಲೂಕಿನ ಮೇದೂರು ಗ್ರಾಮದ 56 ವರ್ಷದ ಪುರುಷ (ಪಿ-220053) ತೀವ್ರ ಉಸಿರಾಟದ ತೊಂದರೆಯಿಂದ ಆ. 14ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ರ್ಯಾಪಿಡ್ ಆಂಟಿಜನ್ ಕಿಟ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, ಅಂದೇ ಮೃತಪಟ್ಟಿದ್ದಾರೆ. ರಾಣೆಬೆನ್ನೂರಿನ ಹರಳಯ್ಯ ನಗರದ 65 ವರ್ಷದ ಮಹಿಳೆ (ಪಿ-214777) ತೀವ್ರ ಉಸಿರಾಟದ ತೊಂದರೆಯಿಂದ ಆ. 13 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅಂದೇ ಅವರನ್ನು ರ್ಯಾಪಿಡ್ ಆಂಟಿಜನ್ ಟೆಸ್ಟ್ಗೆ ಒಳಪಡಿಸಿದ್ದು ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿತ್ತು. ಆ. 14ರಂದು ಮೃತಪಟ್ಟಿದ್ದಾರೆ. ಕೋವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.