More

    ಸೋಮನಹಳ್ಳಿಯಲ್ಲಿ ರಥೋತ್ಸವ

    ನಾಗಮಂಗಲ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಸೋಮನಹಳ್ಳಿ ಅಮ್ಮನ ಕ್ಷೇತ್ರದಲ್ಲಿ ಭಾನುವಾರ ಮಧ್ಯಾಹ್ನ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ಇದರೊಂದಿಗೆ ಹತ್ತು ದಿನಗಳ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
    ಜಾತ್ರಾ ಮಹೋತ್ಸವ ಅಂಗವಾಗಿ ಕಳೆದ ಒಂಭತ್ತು ದಿನಗಳಿಂದ ಅಂಕುರಾರ್ಪಣೆ, ಪಂಚಾಮೃತಾಭಿಷೇಕ, ದನಗಳ ಜಾತ್ರೆ, ಬಿಸಿಲು ಕೊಂಡೋತ್ಸವ, 101 ಮಡೆ ಆರತಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದವು. ಭಾನುವಾರ ಮಧ್ಯಾಹ್ನ 1.30ಗಂಟೆಗೆ ತಹಸೀಲ್ದಾರ್ ಸ್ವಾಮೀಗೌಡ ರಥಕ್ಕೆ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಭಕ್ತರು ದೇವಾಲಯದ ಸುತ್ತ ಕಲ್ಲಿನ ಚಕ್ರದ ರಥ ಎಳೆಯುವ ಮೂಲಕ ಭಕ್ತಿ ಮೆರೆದರು.
    ದೇವಿಯ ಮೂಲ ಸ್ಥಾನ ಚಿಣ್ಯ ಸೇರಿದಂತೆ, ಹೊಣಕೆರೆ, ವಡ್ಡರಹಳ್ಳಿ, ಗುಡ್ಡೇನಹಳ್ಳಿ, ಸೋಮನಹಳ್ಳಿ, ಅಲ್ಪಹಳ್ಳಿ, ಜೋಡಿಹೊಸೂರು, ಗಂಗನಹಳ್ಳಿ, ಕನಗೋನಹಳ್ಳಿ, ಕುಪ್ಪಹಳ್ಳಿ, ಕೆಮ್ಮನಹಳ್ಳಿ ಸೇರಿದಂತೆ ಜಿಲ್ಲೆ ಮತ್ತು ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ರಥಕ್ಕೆ ಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು.
    ಸನ್ನಿಧಿಯ ಶ್ರೀ ಕೋಟೆಮಾರಮ್ಮದೇವಿ ಮತ್ತು ಶ್ರೀ ಆಂಜನೇಯಸ್ವಾಮಿ, ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮದೇವಿ ದೇವಾಲಯಗಳಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಅವಭೃತಾಮೃತ ಮತ್ತು ಅಶ್ವಾರೋಹಣ ಸೇವೆ ನಂತರ ದೇವಿಯನ್ನು ಕಟ್ಟೆಮನೆ ಚಿಣ್ಯದ ಮೂಲಸ್ಥಾನಕ್ಕೆ ಕರೆದೊಯ್ಯಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts