More

    ಸೌಲಭ್ಯ ಬಳಸಿಕೊಂಡು ಉನ್ನತ ಹುದ್ದೆ ಅಲಂಕರಿಸಿ

    ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಇವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


    ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕುವಂತೆ ಮಾಡಲು ದಿ.ಮಹದೇವಪ್ರಸಾದ್ ಗ್ರಾಮಾಂತರ ಪ್ರದೇಶಗಳಲ್ಲಿಗೂ ಕಾಲೇಜು ಆರಂಭಿಸಿದ್ದರು. ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸವಲತ್ತುಗಳ ಒದಗಿಸಿಕೊಡಲಾಗುವುದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಹೇಳಿದರು.


    ಪ್ರಾಂಶುಪಾಲ ಡಾ. ಎ.ಆರ್ ಮದನ್ ಕುಮಾರ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಕೆ. ಚಾಮರಾಜು, ಕಚೇರಿ ಅಧೀಕ್ಷಕ ಎನ್.ಪುಟ್ಟಬುದ್ದಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಟಿ.ಆರ್ ಗಿರೀಶ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಎಸ್‌ಆರ್‌ಎಸ್ ರಾಜಶೇಖರ್, ತಾಪಂ ಮಾಜಿ ಸದಸ್ಯ ಎಚ್.ಎನ್ ಬಸವರಾಜು, ಪುರಸಭೆ ಸದಸ್ಯ ಕುಮಾರ್, ಮಾಜಿ ಸದಸ್ಯ ಸುರೇಂದ್ರ, ಕಲಾವಿದ ಮಿಮಿಕ್ರಿ ಗೋಪಿ, ತಬಲವಾದಕ ರಘುನಾಥ್ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts