More

    ಸ್ವಚ್ಛ ಮದ್ದೂರು ಸಂಕಲ್ಪ ಮಾಡಿ

    ಮದ್ದೂರು: ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಪಾತ್ರ ಮುಖ್ಯವಾಗಿದ್ದು, ‘ಸ್ವಚ್ಛ ಮದ್ದೂರು’ ಮಾಡಲು ಜನತೆ ಸಂಕಲ್ಪ ಮಾಡಬೇಕು ಎಂದು ಪುರಸಭಾ ಮಾಜಿ ಅಧ್ಯಕ್ಷ ಸುರೇಶ್ ತಿಳಿಸಿದರು.
    ಪಟ್ಟಣದ ಸಿಡಿಎಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ‘ಮೇರಾ ಸ್ವಚ್ಛ ಷಹರ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ತ್ಯಾಜ್ಯವಸ್ತುಗಳ ವಿಲೇವಾರಿ ವಿಷಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಹಸಿ ಕಸ, ಒಣ ಕಸ ವಿಲೇವಾರಿಗಾಗಿ ಪಟ್ಟಣದ ವ್ಯಾಪ್ತಿಯ ಪ್ರತಿ ಮನೆಗಳಿಗೆ ಎರಡು ಡಬ್ಬಿಗಳನ್ನು ನೀಡಿ ಜಾಗೃತಿ ಮೂಡಿಸಲಾಗಿತ್ತು ಎಂದರು.
    ತಹಸೀಲ್ದಾರ್ ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದಿಂದ ಈ ಕಾರ್ಯಕ್ರಮದಡಿ ಪಟ್ಟಣ ವ್ಯಾಪ್ತಿಯಲ್ಲಿ 2 ‘ಆರ್‌ಆರ್‌ಆರ್’ ಕೇಂದ್ರಗಳನ್ನು ತೆರಯಲಾಗುವುದು. ಇದಕ್ಕಾಗಿ 1 ಲಕ್ಷ ರೂ. ಮಂಜೂರಾಗಿದೆ ಎಂದು ಮಾಹಿತಿ ನೀಡಿದರು.
    ಪುರಸಭಾ ಮುಖ್ಯಧಿಕಾರಿ ಅಶೋಕ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ, ಸದಸ್ಯರಾದ ಸುಮಿತ್ರಾ, ವನಿತಾ, ತನುಜಾ, ಮಹೇಶ್, ಸರ್ವಮಂಗಳ, ರತ್ನಮ್ಮ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts