More

    ಹಳೇ ಕಡಬಗೆರೆ ಗಣಪತಿ ಜಲಸ್ತಂಭನ

    ಬಾಳೆಹೊನ್ನೂರು: ದೇವದಾನ ಗ್ರಾಮದ ಹಳೇ ಕಡಬಗೆರೆಯಲ್ಲಿ ವಿದ್ಯಾಗಣಪತಿ ಸೇವಾ ಸಮಿತಿಯ ರಜತಮಹೋತ್ಸವದ ಗಣೇಶೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಗುರುವಾರ ರಜತ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ 25 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪೂರ್ವಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಹತ್ತು ವರ್ಷಗಳಿಂದ ಅನ್ನಸಂತರ್ಪಣೆ ಸೇವೆ ನಡೆಸುತ್ತಿರುವ ಕಡಬಗೆರೆ ಮಲೆನಾಡು ಸಮಾಜ ಸೇವಾ ಸಂಘದ ಅಧ್ಯಕ್ಷ ಸಂತೋಷ್, ಗೌರವಾಧ್ಯಕ್ಷ ಚಂದ್ರಶೇಖರ್ ರೈ ಅವರನ್ನು ಗೌರವಿಸಲಾಯಿತು. ಶುಕ್ರವಾರ ವಿದ್ಯಾಗಣಪತಿ ಮೂರ್ತಿ ಮೆರವಣಿಗೆ ನಡೆಸಿ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts