More

    ಹಾವು ಕಚ್ಚಿ ಇಬ್ಬರು ಮಹಿಳೆಯರು ಸಾವು

    ಹೂವಿನಹಡಗಲಿ: ತಾಲೂಕಿನ ಅಂಗೂರು ಹಾಗೂ ಹಿರೇಬನ್ನಿಮಟ್ಟಿಯ ಹೊಲಗಳಲ್ಲಿ ಭಾನುವಾರ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಹುಲಿಗೆವ್ವ ಚಿಂಚಲಿ(49) ಹಾಗೂ ವೀಣಾ ಲಿಂಗನಗೌಡ್ರು (26) ಮೃತರು. ಅಂಗೂರಿನ ಭತ್ತದ ಗದ್ದೆಯಲ್ಲಿ ನಾಟಿ ಮಾಡುವಾಗ ಹುಲಿಗೆವ್ವಗೆ ಹಾವು ಕಚ್ಚಿದೆ.

    ಸ್ಥಳದಲ್ಲಿದ್ದವರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಅಸುನೀಗಿದ್ದಾರೆ. ಮೃತೆಗೆ ಪತಿ, ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ.ಹಿರೇಬನ್ನಿಮಟ್ಟಿ ಗ್ರಾಮದ ಮಹಿಳೆಗೆ ಹಾವು ಕಚ್ಚಿ ಚಿಕಿತ್ಸೆ ದೊರಕದೆ ಸಾವನಪ್ಪಿರುವ ಘಟನೆ ಭಾನುವಾರ ನಡೆದಿದೆ.

    ಹಿರೇಬನ್ನಿಮಟ್ಟಿ ಗ್ರಾಮದಲ್ಲಿ ಮೆಕ್ಕೆಜೋಳ ಕಟಾವು ಮಾಡುತ್ತಿರುವಾಗ ವೀಣಾಗೆ ಹಾವು ಕಚ್ಚಿದೆ. ಕೂಡಲೇ ಹೊಳಲು ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ವೈದ್ಯರು ಇಲ್ಲದ ಕಾರಣ ಹಾವೇರಿ ಜಿಲ್ಲೆ ಗುತ್ತಲ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಪತಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣ ಹಿರೇಹಡಗಲಿ ಠಾಣೆಯಲ್ಲಿ ದಾಖಲಾಗಿವೆ.

    ಇದನ್ನು ಓದಿ: http://ಹಾವು ಕಚ್ಚಿ ಇಬ್ಬರು ಮಹಿಳೆಯರು ಸಾವು

    ಗ್ರಾಮಸ್ಥರ ಆಕ್ರೋಶ: ಹೊಳಲು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಇಲ್ಲದ ಕಾರಣ ವೀಣಾಗೆ ತಕ್ಷಣ ಚಿಕಿತ್ಸೆ ಸಿಗಲಿಲ್ಲ. ಗುತ್ತಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಸಿಬ್ಬಂದಿ, ಸೂಕ್ತ ಚಿಕಿತ್ಸೆ ಇಲ್ಲದೆ ರೋಗಿಗಳು ನಿತ್ಯ ಪರದಾಡುವಂತಾಗಿದೆ. ದೂರದ ಊರುಗಳಿಗೆ ತೆರಳುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts