ಕೊಡಗು :ಸಿದ್ದಾಪುರದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಗೋಳಿ ಹುಂಡಿಯಲ್ಲಿ ಹಾಡಹಗಲೇ ಹುಲಿ ದಾಳಿ ನಡೆಸಿ, ಹಸುವನ್ನು ಕೊಂದು ಹಾಕಿದೆ. ಮೈಲದಪುರದ ಪ್ರೇಮಾ ಅವರು ಭಾನುವಾರ ಮಧ್ಯಾಹ್ನ ಹಸುವನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಹುಲಿ ದಾಳಿ ಮಾಡಿದೆ. ಇದನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ.
ಸ್ಥಳಕ್ಕೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿದ್ದರು. ಗ್ರಾಮಸ್ಥರು ಹುಲಿ ಸೆರೆಹಿಡಿಯಲು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.