More

    ಹಾನಿಯಾದ ಮನೆಗಳ ಜಂಟಿ ಸಮೀಕ್ಷೆ ಮಾಡಿ

    ಯಾದಗಿರಿ : ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ನಿರ್ದೇಶನ ನೀಡಿದರು.

    ಸೋಮವಾರ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿದ ಅವರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಜಂಟಿ ಸಮೀಕ್ಷೆ ಮಾಡಬೇಕು. ಶಹಾಪುರ ತಾಲೂಕಿನಲ್ಲಿ ೨೭ ಮನೆಗಳು ಮಳೆಯಿಂದ ಹಾನಿಯಾಗಿವೆ. ಜಿಲ್ಲೆಯಲ್ಲಿ ಸತತ ಮಳೆಯಿಂದ ನಗರ ಮತ್ತು ಗ್ರಾಮೀಣ ಭಾಗದ ಹಳ್ಳ, ಕೆರೆಗಳು ತುಂಬಿದ್ದು, ನದಿಯಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

    ನಂತರ ಗ್ರಾಮದ ಬಾಪೂಜಿ ಕೇಂದ್ರಕ್ಕೆ ತೆರಳಿ ಗೃಹಲಕ್ಷಿö್ಮÃ ಯೋಜನೆಯಡಿ ಅರ್ಜಿ ಸಲ್ಲಿಸುತ್ತಿರುವ ಅರ್ಹ Àಲಾನುಭವಿಗಳ ಕುರಿತು ಮಾಹಿತಿ ಪಡೆದರು. Àಲಾನುಭವಿಗಳಿಗೆ ಸರ್ಕಾರವೇ ಸಂದೇಶ ಕಳುಹಿಸಲಿದ್ದು, ಅಂಥವರು ಮಾತ್ರ ನಿಗದಿತ ಕೇಂದ್ರಕ್ಕೆ ಸರಿಯಾದ ಸಮಯಕ್ಕೆ ತೆರಳಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

    ಈ ಯೋಜನೆಯಡಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ನೋಂದಾಯಿಸುವ Àಲಾನುಭವಿ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂಬುದನ್ನು ತಿಳಿಸಬೇಕು ಎಂದು ಕೇಂದ್ರದ ಸಿಬ್ಬಂದಿಗೆ ಸೂಚಿಸಿದರು. ತಹಸೀಲ್ದಾರ್ ಉಮಾಕಾಂತ ಹಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts