More

    ಹಾಸನ ಡಿಸಿ ಸಿ.ಸತ್ಯಭಾಮಾ ವಿರುದ್ಧ ಎಚ್ಡಿಡಿ ಚುನಾವಣಾ ಆಯೋಗಕ್ಕೆ ದೂರು

    ಹಾಸನ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಸಿ.ಸತ್ಯಭಾಮಾ ಅವರ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.
    ಕಳೆದ ಎಂಟು ತಿಂಗಳಿಂದ ಹಾಸನದ ಡಿಸಿ ಆಗಿರುವ ಸಿ.ಸತ್ಯಭಾಮ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಆಣತಿಯಂತೆ ಮಾತ್ರ ಕೆಲಸ ಮಾಡುತ್ತಾರೆ. ಇವರಿಂದ ನಿಷ್ಪಕ್ಷಪಾತ ಆಡಳಿತ ಸಾಧ್ಯವಿಲ್ಲ. ಅವರ ಆಡಳಿತದಲ್ಲಿ ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಜಿ ಪ್ರಧಾನಿ ಮಾ.20 ರಂದು ಲಿಖಿತ ದೂರು ನಿಡಿದ್ದಾರೆ ವರ್ಗಾವಣೆ ಮಾಡುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
    ಅಷ್ಟೇ ಅಲ್ಲ ಹಾಸನ ಡಿಸಿ ಜನರ ಜೊತೆ ಸೌಜನ್ಯದ ವರ್ತನೆ ತೋರುವುದಿಲ್ಲ, ತಮ್ಮ ಸಹೊದ್ಯೋಗಿಗಳಿಗೆ ಗೌರವ ಕೊಡಲ್ಲ, ಈ ಹಿಂದೆ ಅವರು ಕೋಲಾರದಲ್ಲಿದ್ದಾಗಲೂ ಸಹೋದ್ಯೋಗಿಗಳ ಜೊತೆ ಜಗಳ ಮಾಡಿಕೊಂಡಿದ್ದರು ಎಂದು ಉಲ್ಲೇಖಿಸಿದ್ದಾರೆ.ಅಲ್ಲದೆ ಹಾಸನದಲ್ಲಿ ಫೆ.24 ಹಾಗೂ ಮಾರ್ಚ್ 1 ರಂದು ನಡೆದ ಸಿಎಂ ಕಾರ್ಯಕ್ರಮಕ್ಕೆ ಇಲಾಖೆಗಳಿಂದ ಹಣ ವಸೂಲಿ ಮಾಡಿದ ಆರೋಪ ಇದೆ. ಲಕ್ಷ ಲಕ್ಷ ಹಣ ವಸೂಲಿ ಮಾಡಿ ಜನರಿಗೆ ಹಂಚಿದ್ದಾರೆ. ಆಡಳಿತ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
    ಹಾಸನದಲ್ಲಿ ತೀವ್ರ ಬರಗಾಲ ಇದೆ, ಕುಡಿಯುವ ನೀರಿನ ಸಮಸ್ಯೆ ಇದೆ, ಹೀಗಿದ್ದರೂ ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ. ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಹಾಸನ ಡಿಸಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.
    ಆಯೋಗದಿಂದ ನೋಟಿಸ್:
    ಈ ಹಿನ್ನೆಲೆಯಲ್ಲಿ ಡಿಸಿ ಸತ್ಯಭಾಮಾ ಅವರಿಗೆ ಚುನಾವಣಾ ಆಯೋಗ ಮಾ.21 ರಂದು ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣೆ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರ ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿ ಆಯೋಗ ಸ್ಪಷ್ಟನೆ ಕೋರಿದೆ.
    ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡುವಂತೆ ತಿಳಿಸಲಾಗಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ಸ್ಪಷ್ಟನೆ ನೀಡಬೇಕು ಎಂದು ಕೋರಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts