ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಹುತ್ತದ ಕೆಂಚಮ್ಮ ದೇವಿಯ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅ. 15ರಿಂದ ಒಂಬತ್ತು ದಿನವೂ ದೇವಿಯ ಆರಾಧನೆ ನಡೆಯಲಿದೆ. ಮೂರ್ತಿಗೆ ವಿಶೇಷಾಲಂಕಾರ, ಪೂಜಾ ವಿಧಿವಿಧಾನಗಳು ಶ್ರದ್ಧಾಭಕ್ತಿಯಿಂದ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.