ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಹೃದಯಾಘಾತ ಮತ್ತು ಪಾರ್ಶ್ವವಾಯು ರೋಗ ಸಂಬಂಧ ಔಷಧಗಳು ಲಭ್ಯವಿದೆ.
ಪಾರ್ಶ್ವವಾಯು ಆದ ನಂತರ 4 ಗಂಟೆಯೊಳಗೆ, ಹೃದಯಾಘಾತವಾಗಿ 6 ಗಂಟೆಯೊಳಗೆ ಆಸ್ಪತ್ರೆಗೆ ದಾಖಲಾಗುವ ರೋಗಿ ಚಿಕಿತ್ಸೆ ಪಡೆಯಬಹುದು. ರೋಗಿಗಳು ಇದರ ಪ್ರಯೋಜನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.