More

    ಹೃದಯಾಘಾತದಿಂದ ತಾಯಿ, ಮಗ ಸಾವು

    ಎಚ್​.ಡಿ.ಕೋಟೆ: ತಾಯಿ ಪಾರ್ಶ್ವವಾಯುಗೀಡಾದ ಸುದ್ದಿ ಕೇಳಿ ಮಗ ಹೃದಯಾಘಾತದಿಂದ ಮೃತಪಟ್ಟರೆ, ಮಗ ಸತ್ತ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಸಾವಿಗೀಡಾದರು. ಪಟ್ಟಣದ ಸಿದ್ದಪ್ಪಾಜಿ ರಸ್ತೆ ನಿವಾಸಿ ಗೋಪಾಲಯ್ಯ ಅವರ ಪತ್ನಿ ಸಣ್ಣಮಂಚಮ್ಮ(58), ಇವರ ಪುತ್ರ ಕೃಷ್ಣ (45) ಮೃತರು. ಎಚ್​.ಡಿ. ಕೋಟೆ ಪಟ್ಟಣದ ಸೇಂಟ್​ ಮೇರಿಸ್​ ಆಸ್ಪತ್ರೆ ಮುಂಭಾಗ ಕೃಷ್ಣ ಅವರು ಟೀ ಅಂಗಡಿ ನಡೆಸುತ್ತಿದ್ದರು. ಜತೆಗೆ ಆಟೋಚಾಲಕರೂ ಆಗಿದ್ದರು.

    ಕೃಷ್ಣ ಅವರ ತಾಯಿ ಸಣ್ಣಮಂಚಮ್ಮ ಭಾನುವಾರ ಪಾರ್ಶ್ವವಾಯುಗೆ ತುತ್ತಾಗಿದ್ದರು. ಸಂಬಂಧಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ, ಈ ವಿಚಾರವನ್ನು ಮಗನಿಗೆ ತಿಳಿಸಿದ್ದಾರೆ. ವಿಚಾರ ಕೇಳಿದ ಕೃಷ್ಣ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದರು.

    ತಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಅಷ್ಟರಲ್ಲಿ ಮೃತಪಟ್ಟಿದ್ದರು. ಮಗ ಮೃತಪಟ್ಟ ವಿಷಯವನ್ನು ತಾಯಿಗೆ ತಿಳಿಸಿದಾಗ ಅವರು ಹೃದಯಾಘಾತಕ್ಕೆ ಒಳಗಾಗಿ ನಿಧನರಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts