More

    ಹೆಬ್ಬಾಳಕರಗೆ ಕಾಂಗ್ರೆಸ್ ಸರ್ಕಾರದಲ್ಲಿ ಉನ್ನತ ಸ್ಥಾನ

    ಬೆಳಗಾವಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಮಂಗಳವಾರ ಸಂಜೆ ಹಿಂಡಲಗಾದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ತನ್ಮೂಲಕ ಬಿಜೆಪಿ ಅಭ್ಯರ್ಥಿಯ ತವರಿನಲ್ಲೇ ಕಾಂಗ್ರೆಸ್ ಅದ್ಧೂರಿ ಶಕ್ತಿ ಪ್ರದರ್ಶನ ತೋರಿಸಿದೆ. ಹಿಂಡಲಗಾ ಮಹಾಲಕ್ಷ್ಮೀ ಮಂದಿರದಿಂದ ರೋಡ್ ಶೋ ನಡೆಸಿದ ಪೃಥ್ವಿರಾಜ ಚವ್ಹಾಣ, ಬಿಜೆಪಿ ಸರ್ಕಾರ ಶೇ.40 ಕಮೀಷನ್ ಪಡೆದು ಕರ್ನಾಟಕವನ್ನು ವಿನಾಶದತ್ತ ಕೊಂಡೊಯ್ದಿದಿದೆ. ಚುನಾವಣೆ ಬಂದಾಗ ಜನ ಬಳಿ ಬರುತ್ತಿದ್ದಾರೆ. ನಾನು 2018ರಿಂದ ಲಕ್ಷ್ಮೀ ಹೆಬ್ಬಾಳಕರ್ ಅವರ ಕೆಲಸವನ್ನು ನೋಡುತ್ತಿದ್ದೇನೆ. ಸರ್ಕಾರ ನಮ್ಮದಿಲ್ಲದಿದ್ದರೂ ಅಪಾರ ಪ್ರಮಾಣದಲ್ಲಿ ಅನುದಾನ ತಂದಿದ್ದಾರೆ. ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವಿರಲಿ, ಮತದಾರರಿರಲಿ ತಮಗೆ ವಹಿಸಿದ ಎಲ್ಲ ಜವಾಬ್ದಾರಿಗಳನ್ನು ಲಕ್ಷ್ಮೀ ಹೆಬ್ಬಾಳಕರ್ ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಬರಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಹೆಬ್ಬಾಳಕರ್ ಅವರಿಗೆ ದೊಡ್ಡ ಸ್ಥಾನ ಸಿಗಲಿದೆ ಎಂದು ಹೇಳಿದರು. ಶಾಸಕಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.

    ಬೆಳಗಾವಿ ವರದಿ: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಮಣ್ಣೂರು ಸೇರಿ ವಿವಿಧ ಪ್ರದೇಶದಲ್ಲಿ ಬುಧವಾರ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ರೈತರು, ಯುವಕರು, ಮಹಿಳೆಯರಿಗಾಗಿ ವಿವಿಧ ಯೋಜನೆ ಘೋಷಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ತಿಳಿಸಿದರು.
    ಅಪಾರ ಜನ ಬೆಂಬಲ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೂರ್ವ ಭಾಗದಂತೆ ಪಶ್ಚಿಮ ಭಾಗದಲ್ಲೂ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿ ಊರಲ್ಲಿ ಸಾಗರೋಪಾದಿಯಲ್ಲಿ ಜನರು ರೋಡ್ ಶೋ, ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts