More

    ಹೆಬ್ಬಾಳು ಮಠ ಜಾತ್ಯತೀತ ಕೇಂದ್ರ – ಕಂದಗಲ್ ನಲ್ಲಿ ಸಮುದಾಯ ಭವನಕ್ಕೆ ಭೂಮಿಪೂಜೆ

    ದಾವಣಗೆರೆ: ಹೆಬ್ಬಾಳು ಮಠ, ಎಲ್ಲಾ ಸಮುದಾಯ ಒಗ್ಗೂಡಿಸಿಕೊಂಡು ಹೋಗುವ ಜಾತ್ಯತೀತ ಕೇಂದ್ರವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

    ಕಂದಗಲ್ಲು ಗ್ರಾಮದಲ್ಲಿ ಸೋಮವಾರ ಶ್ರೀಮಹೇಶ್ವರ ಸ್ವಾಮಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
    ಗ್ರಾಮಸ್ಥರು ಸಮುದಾಯ ಭವನಕ್ಕೆ ಬೇಡಿಕೆ ಇಟ್ಟಿದ್ದಾರೆ. ಗ್ರಾಮದ ಜನರು ನಗರಗಳಿಗೆ ಹೋಗಿ ಮದುವೆ ಸಮಾರಂಭ, ಇನ್ನಿತರೆ ಕಾರ್ಯಕ್ರಮಗಳನ್ನು ಮಾಡಿ ದುಂದು ವೆಚ್ಚ ಮಾಡುವುದಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನಿರ್ಮಾಣ ಮಾಡಿದರೆ ದುಂದು ವೆಚ್ಚ ತಪ್ಪಿಸಬಹುದು ಎಂದು ಹೇಳಿದರು.

    ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
    ಹೆಬ್ಬಾಳು ಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭೂಮಿ ದಾನಿ, ನಿವೃತ್ತ ಶಿಕ್ಷಕ ಕೆ.ಎಂ.ಮಹೇಶ್ವರಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಗೌಡ್ರು, ಶ್ರೀಮಹಾಂತಸ್ವಾಮಿ ಸಮುದಾಯ ಭವನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ರೇವಣಸಿದ್ದಪ್ಪ, ಉಪಾಧ್ಯಕ್ಷ ಕೆ.ಪಿ.ಪರಮೇಶ್ವರಪ್ಪ, ಕಾರ್ಯದರ್ಶಿ ಬಿ.ಸಿ.ಬಸವರಾಜಪ್ಪ, ಖಜಾಂಚಿ ಸಿ.ಜಿ.ಕಲ್ಲಪ್ಪ, ಸದಸ್ಯ ಮಲ್ಲಪ್ಪ ಸೇರಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts