ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್​ಎಫ್​ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

blank

ಇಂಫಾಲ್​: ಗಲಭೆ ಪೀಡಿತ ಮಣಿಪುರದಲ್ಲಿ ಶಂಕಿತ ಕೂಕಿ ಬಂಡುಕೋರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಡಿ ಭದ್ರತಾ ಪಡೆ(BSF)ಯ ಯೋಧರೊಬ್ಬರು ಹುತಾತ್ಮರಾಗಿದ್ದು, ಅಸ್ಸಾಂ ರೈಫಲ್​ನ ಇಬ್ಬರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ಧಾರೆ.

ಮೃತ ಸೈನಿಕನನ್ನು ರಂಜಿತ್ ಯಾದವ್​ ಎಂದು ಗುರುತಿಸಲಾಗಿದೆ. ಕಾಕ್​ಜಿಂಗ್​ ಜಿಲ್ಲೆಯ ಸುಗನು ಪ್ರದೇಶದಲ್ಲಿರುವ ಸೆರೌ ಶಾಲೆಯಲ್ಲಿ ಬಿಎಸ್​ಎಫ್​ ಯೋಧರು ಹಾಗೂ ಶಂಕಿತ ಬಂಡುಕೋರರ ನಡುವೆ ಗುಂಡಿನ ಕಾಳಗ ನಡೆದಿದೆ.

ಇದನ್ನೂ ಓದಿ: ಖಾಸಗಿ ಶಾಲೆಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ; ವ್ಯಾಪಕ ಖಂಡನೆ

ಸೆರೌ ಫ್ರೌಢಶಾಲೆಗೆ ಬಿಎಸ್​ಎಫ್​ ಯೋಧರನ್ನು ನಿಯೋಜಿಸಲಾಗಿತ್ತು. ಜೂನ್​ 6ರಂದು ನಸುಕಿನ 4:15ರ ಸುಮಾರಿಗೆ ಬಂಡುಕೋರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ಧಾರೆ. ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ರಂಜಿತ್​ ಯಾದವ್​ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದರು ಎಂದು ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.

ಗಂಭೀರವಾಗಿ ಗಾಯಗೊಂಡಿರುವ ಅಸ್ಸಾಂ ರೈಫಲ್​ನ ಇಬ್ಬರು ಯೋಧರನ್ನು ಏರ್​ ಆ್ಯಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಮಂತ್ರಿಪುಖ್ರಿಗೆ ಕಳುಹಿಸಿಕೊಡಲಾಗಿದೆ ಎಂದು ಬಿಎಸ್​ಎಫ್​ನ ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ಧಾರೆ.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…