More

    10ರ ವರೆಗೆ ಕ್ಯಾನ್ಸರ್ ತಪಾಸಣಾ ಶಿಬಿರ, ಜಾಗೃತಿ ಜಾಥಾ

    ಬೆಳಗಾವಿ: ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಫೆ. 4ರಿಂದ 10ರ ವರೆಗೆ ಕ್ಯಾನ್ಸರ್ ಜಾಗೃತಿ ಜಾಥಾ, ತಪಾಸಣಾ ಶಿಬಿರ ಆಯೋಜನೆೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ.

    ನಗರದ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಯಿ ಮಕ್ಕಳ ಆರೋಗ್ಯ ಕೇಂದ್ರದಲ್ಲಿ ಜಿಪಂ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾರಂಭದ ಹಂತದಲ್ಲಿ ಕ್ಯಾನ್ಸರ್ ರೋಗ ಪತ್ತೆಹಚ್ಚಿ, ಚಿಕಿತ್ಸೆ ನೀಡಿದರೆ ಕ್ಯಾನ್ಸರ್‌ನಿಂದ ಗುಣ ಹೊಂದಬಹುದು ಎಂದರು. ತಾಲೂಕು ಆರೋಗ್ಯಧಿಕಾರಿ ಡಾ. ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ್, ರಾಜಶೇಖರ ಡೋನಿ, ಪಾಲಿಕೆ ಸದಸ್ಯ ಮಹಾದೇವ ರಾಠೋಡ್, ಡಾ.ರಾಜಶೇಖರ ಯರಝರ್ವಿ, ಡಾ. ಸಂಜಯ ದೊಡ್ಡಮನಿ, ಡಾ. ಜಯಾನಂದ, ಡಾ. ಅನುಶ್ರೀ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts