ಅಹಮದ್ನಗರ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಹತ್ತಿಕೊಂಡ ಪರಿಣಾಮವಾಗಿ 10 ಜನ ಕರೊನಾ ರೋಗಿಗಳು ಸಾವಪ್ಪಿರುವ ಘಟನೆ ಇಂದು ನಡೆದಿದೆ. ಅಹಮದ್ನಗರ್ ಜಿಲ್ಲಾಸ್ಪತ್ರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಉಂಟಾಯಿತು. ಐಸಿಯುನಲ್ಲಿ ಅಡ್ಮಿಟ್ ಆಗಿದ್ದ 25 ಜನ ರೋಗಿಗಳಲ್ಲಿ ಇನ್ನೂ ಆರು ಜನರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಇಂದು ಬೆಳಿಗ್ಗೆ 11 ಗಂಟೆಯ ವೇಳೆಗೆ ಬೆಂಕಿ ಹತ್ತಿಕೊಂಡಿತು ಎಂದು ಅಹಮದ್ನಗರ ಮುನಿಸಿಪಾಲಿಟಿಯ ಅಧಿಕಾರಿ ಶಂಕರ್ ಮಿಸಲ್ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ 10 ಕರೊನಾ ಸೋಂಕಿತರು ಸಾವಪ್ಪಿದ್ದಾರೆ ಎಂದು ಡಿಸಿ ರಾಜೇಂದ್ರ ಭೋಸ್ಲೆ ತಿಳಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಈ ಅಗ್ನಿ ದುರಂತದ ಬಗ್ಗೆ ಆಳವಾದ ತನಿಖೆ ನಡೆಯಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. (ಏಜೆನ್ಸೀಸ್)