More

    ಜಮ್ಮ ಮತ್ತು ಕಾಶ್ಮೀರ: ಕಂದಕಕ್ಕೆ ಉರುಳಿದ ಟ್ಯಾಕ್ಸಿ, ಹತ್ತು ಜನರ ದುರ್ಮರಣ

    ಜಮ್ಮು ಮತ್ತು ಕಾಶ್ಮೀರ: ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಆಳವಾದ ಕಂದಕಕ್ಕೆ ಉಳಿದು ಬಿದ್ದ ಪರಿಣಾಮ ಹತ್ತು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ರಾಮ್‌ಬನ್ ಪ್ರದೇಶದ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ.

    ಇದನ್ನೂ ಓದಿ: ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

    ಪ್ರಯಾಣಿಕರಿದ್ದ ಟ್ಯಾಕ್ಸಿ ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

    ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು, ಪ್ರಯಾಣಿಕರನ್ನು ಕರೆದೊಯ್ಯುವ ಟ್ಯಾಕ್ಸಿ ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ, ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಂಬನ್‌ನಿಂದ ನಾಗರಿಕ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಸ್ಥಳಕ್ಕೆ ಧಾವಿಸಿದರು. ಕಾಲುವೆಗೆ ಇಳಿದ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ.

    ರಕ್ಷಣಾ ಕಾರ್ಯಾಚರಣೆ ಬೆಳಗ್ಗೆಯಿಂದಲೇ ಆರಂಭವಾಗಿದ್ದು ಇದುವರೆಗೆ 10 ಮೃತದೇಹಗಳು ಪತ್ತೆಯಾಗಿವೆ. ಆದಾಗ್ಯೂ, ಪ್ರದೇಶದಲ್ಲಿ ಆಳವಾದ ಕಂದಕಗಳು, ಕತ್ತಲೆ ಮತ್ತು ಧಾರಾಕಾರ ಮಳೆಯಿಂದ ರಕ್ಷಣಾ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ. ಈ ನಡುವೆ ಕೆಲಕಾಲ ಕಾರ್ಯಾಚರಣೆ ಸ್ಥಗಿತಗೊಂಡಿತ್ತು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಮಳೆಯೇ ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ರಕ್ಷಣಾ ಸಿಬ್ಬಂದಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

    ಶುಕ್ರವಾರ ಬೆಳಗಿನ ಜಾವ 1.15ರ ಸುಮಾರಿಗೆ ಅಪಘಾತದ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತವೀರಾ ತನ್ನ ಕಾರಿನಲ್ಲಿ ಕ್ಯಾಬ್ ಪ್ರಯಾಣಿಕರೊಂದಿಗೆ ಕಾಶ್ಮೀರಕ್ಕೆ ಹೋಗುತ್ತಿದ್ದಾಗ ದಾರಿಯಲ್ಲಿ ಅಹಿತಕರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 300 ಮೀಟರ್ ಆಳದ ಕಂದರಕ್ಕೆ ಕ್ಯಾಬ್ ಬಿದ್ದಿದೆ. ಸದ್ಯ ಹೊರತೆಗೆದಿರುವ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಲು ತಯಾರಿ ನಡೆಸಲಾಗಿದೆ.

    ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ರಾಂಬನ್ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಭೀಕರ ರಸ್ತೆ ಅಪಘಾತದ ಬಗ್ಗೆ ಡಿಸಿ ರಾಂಬನ್ ಬಶೀರ್-ಉಲ್-ಹಕ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.

    ಪೊಲೀಸರು, ಎಸ್‌ಡಿಆರ್‌ಎಫ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುಟುಂಬಗಳಿಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಗುರುವಾರ ಹವಾಮಾನ ಇಲಾಖೆಯು ಮುನ್ಸೂಚನೆಯಂತೆ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಹಾಗೂ ಹಿಮ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ.

    ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts