ಚಿಕ್ಕಮಗಳೂರು: ಅಧಿಕಾರಿಗಳ ವರ್ತನೆಗೆ ಬೇಸತ್ತು ಒಂದೇ ಗ್ರಾಮ ಪಂಚಾಯಿತಿಯ 10 ಸದಸ್ಯರು ರಾಜೀನಾಮೆ

ಚಿಕ್ಕಮಗಳೂರು: ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಒಂದೇ ಗ್ರಾಮ ಪಂಚಾಯಿತಿಯ 10 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ ಒಂದೇ ದಿನ 10 ಸದಸ್ಯರು ರಾಜೀನಾಮೆ ನೀಡಿದ್ದಾರೆ. ರಸ್ತೆ ಅಗಲೀಕರಣ, ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ಮಳೆಯಿಂದ ಕುಸಿದ 17 ಮನೆಗಳ ಸ್ಥಳಾಂತರಕ್ಕೂ ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ಅಧಿಕಾರಿಗಳ ಈ ದುವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಸದಸ್ಯರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮಾದಪ್ಪನ … Continue reading ಚಿಕ್ಕಮಗಳೂರು: ಅಧಿಕಾರಿಗಳ ವರ್ತನೆಗೆ ಬೇಸತ್ತು ಒಂದೇ ಗ್ರಾಮ ಪಂಚಾಯಿತಿಯ 10 ಸದಸ್ಯರು ರಾಜೀನಾಮೆ