More

    ವಾಟ್ಸ್‌ಆ್ಯಪ್ ಸಂದೇಶ ನಂಬಿ 10 ಲಕ್ಷ ರೂ. ಕಳೆದುಕೊಂಡ ಯುವಕ

    ಮೈಸೂರು: ಷೇರು ಮಾರುಕಟ್ಟೆಯಲ್ಲಿ ಲಾಭ ಗಳಿಸಬಹುದು ಎನ್ನುವ ವಾಟ್ಸ್ ಆ್ಯಪ್ ಸಂದೇಶವನ್ನು ನಂಬಿ ಹೂಡಿಕೆ ಮಾಡಿದ ಯುವಕ 10 ಲಕ್ಷ ರೂ. ಕಳೆದುಕೊಂಡು ಈಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಮೈಸೂರಿನ ಗಾಯಿತ್ರಿಪುರಂನ ಕಶ್ಯಪ್ ಹಣ ಕಳೆದುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸಬಹುದು ಎಂದು ವಂಚಕರು ಕಳುಹಿಸಿದ ವಾಟ್ಸ್‌ಆ್ಯಪ್ ಸಂದೇಶ ನಂಬಿದ ಕಶ್ಯಪ್ ಹಂತ ಹಂತವಾಗಿ 10 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಬಳಿಕ ಹಣ ವಾಪಸ್ ಬಾರದೆ ಇದ್ದಾಗ ವಂಚನೆಯಾಗಿರುವುದು ಗೊತ್ತಾಗಿದೆ. ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts