ಅಮರಾವತಿ: ಕಲ್ಲು ಕ್ವಾರಿಯಲ್ಲಿ ಭಾರೀ ಪ್ರಮಾಣದ ಜಿಲೆಟಿನ್ ಸ್ಪೋಟಗೊಂಡ ಪರಿಣಾಮ ಸ್ಥಳದಲ್ಲೇ 10 ಜನ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಕಲಸಪಾಡು ತಾಲೂಕಿನ ಮಾಮಿಲಿಪಲ್ಲಿ ಎಂಬ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತರೆಲ್ಲರೂ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುವ ಗಣಿ ಕಾರ್ಮಿಕರಾಗಿದ್ದರು ಎಂದು ತಿಳಿದು ಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಸಂಭವವಿದ್ದು, ಘಟನೆಯಲ್ಲಿ ಇನ್ನೂ 12 ಜನ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾನೈಟ್ಗಾಗಿ ಸ್ಪೋಟಿಸಲು ಜಿಲೆಟಿನ್ ಕಡ್ಡಿಗಳನ್ನು ಸ್ಥಳದಲ್ಲಿ ಸಂಗ್ರಹಿಸಡಲಾಗಿತ್ತು. ಬೆಳಿಗ್ಗೆ ಕೆಲಸ ಪ್ರಾರಂಭಿಸುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಕರೊನಾ ನಿಯಂತ್ರಣಕ್ಕೆ ಗೋಮೂತ್ರ ಸೇವಿಸಲು ಕರೆ ಕೊಟ್ಟ ಬಿಜೆಪಿ ಶಾಸಕ: ಕುಡಿಯುವ ಕ್ರಮ ಹೀಗಿರಬೇಕಂತೆ!