ಆಂಧ್ರಪ್ರದೇಶ: ದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ರೈಲು ಹಳಿ ತಪ್ಪಿದ್ದರಿಂದಾಗಿ ಬೋಗಿಗಳು ಕಳಚಿಕೊಂಡ ಪ್ರಕರಣ ನಡೆದಿದೆ.
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತಕ್ಕೊಳಗಾದ ರೈಲು ವಿಶಾಖಪಟ್ಟಣದಿಂದ ರಾಯಗಡ ಕಡೆಗೆ ಸಾಗುತ್ತಿದ್ದು, ಈ ಅವಘಡದಲ್ಲಿ ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಶಾಖಪಟ್ಟಣ-ಪಾಲಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ-ರಾಯಗಡ ರೈಲುಗಳ ಹಿಂಭಾಗ ಘರ್ಷಣೆಗೆ ಒಳಗಾದ್ದರಿಂದ ಈ ಅವಘಡ ಸಂಭವಿಸಿದೆ. ಮೂರು ಬೋಗಿಗಳು ಜಖಂಗೊಂಡಿವೆ.
ಎನ್ಡಿಆರ್ಎಫ್ ಮತ್ತು ಸ್ಥಳೀಯಾಡಳಿತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಆ್ಯಕ್ಸಿಡೆಂಟ್ ರಿಲೀಫ್ ಟ್ರೇನ್ಗಳು ಸ್ಥಳಕ್ಕೆ ಧಾವಿಸಿದ್ದು, ಸೂಕ್ತ ಕ್ರಮ ಜರುಗಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
VIDEO | Passenger train travelling to Rayagada, Odisha derails near Vizianagaram, Andhra Pradesh; rescue operation underway. More details are awaited. pic.twitter.com/BDOW16aRUN
— Press Trust of India (@PTI_News) October 29, 2023
(ಇದು ತಕ್ಷಣದ ಸುದ್ದಿ, ಸಂಬಂಧಿತ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ಡೇಟ್ ಆಗಲಿದೆ)
ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..