ವೈಕುಂಠ ಏಕಾದಶಿ ಅಂಗವಾಗಿ 101 ಎಡೆ ಸೇವೆ

blank

ಬೀರೂರು: ಪಟ್ಟಣದ ಸರಸ್ವತಿಪುರಂ ಬಡಾವಣೆಯ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿಗೆ ವೈಕುಂಠ ಏಕಾದಶಿ ಅಂಗವಾಗಿ 101ಎಡೆ ಸೇವೆ ನೆರವೇರಿತು. ಶ್ರೀ ಸ್ವಾಮಿ ಉತ್ಸವ ಮೂರ್ತಿಗೆ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ ನೆರವೇರಿಸಿ ಸಪ್ತದ್ವಾರಗಳನ್ನು ನಿರ್ಮಿಸಲಾಗಿತ್ತು. ಸಂಜೆ ವಾದ್ಯಗೋಷ್ಠಿಗಳೊಂದಿಗೆ ಉತ್ಸವ ಮೂರ್ತಿಗಳಿಗೆ ಪಲ್ಲಕ್ಕಿ ಸೇವೆ ಮೂಲಕ ಉತ್ಸವ ನೆರವೇರಿಸಿ, ದಾಸಪ್ಪನವರ ಶಂಖು, ಗಂಟೆ ನಾದದೊಂದಿಗೆ ಬಾಳೆಹಣ್ಣು, ಹಾಲುತುಪ್ಪಗಳ ಮೂಲಕ 101 ಎಡೆ ಸೇವೆ ನಂತರ ಭಕ್ತರು ಸಪ್ತದ್ವಾರಗಳ ಮೂಲಕ ತೆರಳಿ ಸ್ವಾಮಿಯವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಪುರಸಭೆ ಅನುದಾನದಿಂದ ದೇವಾಲಯದ ಮುಂಭಾಗದಲ್ಲಿ ಸ್ಥಾಪಿಸಲಾದ ಹೈಮಾಸ್ಟ್ ವಿದ್ಯುತ್ ದೀಪವನ್ನು ಪುರಸಭೆ ಸದಸ್ಯ ಬಿ.ಕೆ.ಶಶಿಧರ್ ಉದ್ಘಾಟಿಸಿದರು.
ಪುರಸಭೆ ಉಪಾಧ್ಯಕ್ಷ ಎನ್.ಎಂ.ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ, ಸದಸ್ಯರಾದ ಶಾರದ, ಸುಮಿತ್ರ, ದೇವಸ್ಥಾನ ಸಮಿತಿ ಅಧ್ಯಕ್ಷ ಮಂಜುನಾಥ ಇದ್ದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…