More

    ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ

    ಚಿಕ್ಕೋಡಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಜೈನಮುನಿಯ ಕೊಲೆಯಾಗಿರುವುದು ಬೆಳಕಿಗೆ ಬಂದಿದ್ದು, ಶವಕ್ಕಾಗಿ ಭಾರಿ ಹುಡುಕಾಟ ನಡೆದಿತ್ತು. ಕೊನೆಗೂ ಸ್ವಾಮೀಜಿಯ ಶವ ಪತ್ತೆಯಾಗಿದೆ. ಅವರ ದೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಲಾಗಿದ್ದು, ಶವದ ತುಂಡುಗಳನ್ನು ಬೋರ್​ವೆಲ್​ನೊಳಕ್ಕೆ ಎಸೆಯಲಾಗಿತ್ತು.

    ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಜುಲೈ 5ರ ರಾತ್ರಿ ಹತ್ತರವರೆಗೂ ಆಶ್ರಮದಲ್ಲೇ ಇದ್ದಿದ್ದು, ಜು. 6ರ ಬೆಳಗ್ಗೆ ನಾಪತ್ತೆಯಾಗಿರುವುದು ಕಂಡುಬಂದಿತ್ತು.

    ಇದನ್ನೂ ಓದಿ: ಬಸದಿಯಿಂದ ಇದ್ದಕ್ಕಿದ್ದಂತೆ ಜೈನಮುನಿ ನಾಪತ್ತೆ; ಭಕ್ತರಲ್ಲಿ ಆತಂಕ

    ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ

    ಈ ಸಂಬಂಧ ಭಕ್ತರು ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಅನುಮಾನದ ಮೇರೆಗೆ ಇಬ್ಬರನ್ನು ಇಂದು ವಶಕ್ಕೆ ಪಡೆದಿದ್ದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸ್ವಾಮೀಜಿಯ ಕೊಲೆ ನಡೆದಿರುವುದು ಗೊತ್ತಾಗಿತ್ತು.

    ಇದನ್ನೂ ಓದಿ: ನಾಪತ್ತೆಯಾಗಿದ್ದ ನಂದಿಪರ್ವತ ಆಶ್ರಮದ ಜೈನಮುನಿ ಬರ್ಬರ ಹತ್ಯೆ: ಮೃತದೇಹಕ್ಕಾಗಿ ತೀವ್ರ ಶೋಧ

    ನಾಪತ್ತೆಯಾಗಿದ್ದ ಸ್ವಾಮೀಜಿಯ ದೇಹ ಪೀಸ್ ​ಪೀಸ್​; 400 ಅಡಿ ಆಳದ ಬೋರ್​ವೆಲ್​ನಲ್ಲಿ ಶವದ ತುಂಡುಗಳು ಪತ್ತೆ
    ಪತ್ತೆಯಾಗಿರುವ ಶವದ ತುಂಡುಗಳು

    ಸ್ವಾಮೀಜಿಯ ಶವಕ್ಕಾಗಿ ಪೊಲೀಸರು ಬೆಳಗ್ಗೆ 7ರಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದು, ಕೊನೆಗೂ ಶವ ಪತ್ತೆಯಾಗಿದೆ. ಬೆಳಗಾವಿಯ ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಕೊಳವೆ ಬಾವಿಯಲ್ಲಿ ಶವದ ತುಂಡುಗಳು ಪತ್ತೆಯಾಗಿವೆ. ಸ್ವಾಮೀಜಿಯನ್ನು ಕೊಲೆ ಮಾಡಿ ಕತ್ತರಿಸಿ ಶವದ ತುಂಡುಗಳನ್ನು 400 ಅಡಿ ಬೋರ್​ವೆಲ್​ನೊಳಕ್ಕೆ ಎಸೆಯಲಾಗಿದೆ. ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ್ ನಿನ್ನೆಯಿಂದ ಕಟಕಬಾವಿ ಗ್ರಾಮದಲ್ಲೇ ಬೀಡುಬಿಟ್ಟಿದ್ದು, ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

    ಒಂದು ವರ್ಷದ ಅಂತರ.. ಅದೇ ಜಾಗ.. ಒಂದೇ ಥರದಲ್ಲಿ ಸಂಬಂಧಿಕರಿಬ್ಬರ ಸಾವು!

    ‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts