ಬೆಂಗಳೂರು : ಕರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿರುವುದರಿಂದ ಶಿಕ್ಷಣ ಇಲಾಖೆಯು ಕೆಲವು ನಿಯಮಗಳನ್ನು ಬದಲು ಮಾಡಿದೆ. ಆ ಪ್ರಕಾರವಾಗಿ ಮೇ 4 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ರದ್ದು ಮಾಡಿ ಆನ್ಲೈನ್ನಲ್ಲಿ ಶಿಕ್ಷಣ ನೀಡಲು ಸೂಚಿಸಲಾಗಿದೆ.
ಇನ್ನು 1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನವನ್ನು ಏ.30ರೊಳಗೆ ನಿರ್ವಹಿಸಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಇದನ್ನು ಮಾರ್ಪಾಡು ಮಾಡಿರುವ ಶಿಕ್ಷಣ ಇಲಾಖೆ, ಏ.26ರೊಳಗೆಯೇ ಪೂರ್ಣಗೊಳಿಸುವಂತೆ ಸೂಚಿಸಿದೆ. ಉಳಿದ ಎಲ್ಲ ಶಿಕ್ಷಕರಿಗೂ ಮೇ 4 ರವರೆಗೆ ಶಾಲೆಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಿದೆ.
ಇದನ್ನೂ ಓದಿ: ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಚಿತ್ರ ಅಳವಡಿಕೆ: ಸಾಫ್ಟ್ವೇರ್ ಇಂಜಿನಿಯರ್ ಬಂಧನ
ಈ ಸಮಯದಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ಆನ್ಲೈನ್ ಮತ್ತು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳಿಗೆ ಕಷ್ಟ ಎನಿಸುವ ಅಂಶಗಳನ್ನು ಸುಲಭ ವಿಧಾನದಲ್ಲಿ ತಿಳಿಸಿಕೊಡುವಂತೆ ಶಿಕ್ಷಕರಿಗೆ ಸೂಚಿಸಿದೆ.
ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕರೊನಾ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ, ಶಿಕ್ಷಕರಿಗೆ ಸೂಚಿಸಿದ್ದಾರೆ.
ದೇವಸ್ಥಾನದಲ್ಲಿ ಸಿಕ್ಕಿತು ಪೂಜಾರಿಗಳ ತಲೆ ಕಡಿದ ದೇಹ ! ಬೆಚ್ಚಿಬೀಳಿಸುತ್ತೆ ಈ ಘಟನೆ